ಸಿ.ಟಿ.ರವಿ ಅವರ ಹಾಡಿ ಹೊಗಳಿದ ಶಾಸಕ ಬೆಳ್ಳಿ ಪ್ರಕಾಶ್
1 min readಚಿಕ್ಕಮಗಳೂರು : ಸಂಪುಟ ರಚಿಸುವಾಗ ಚಿಕ್ಕಮಗಳೂರು ಜಿಲ್ಲೆಯನ್ನು ಕಡೆಗಣಿಸಿಲ್ಲ. ಇಡೀ ರಾಷ್ಟ್ರದ ಮಹಾಮಂತ್ರಿ ಇರೋದೇ ನಮ್ಮ ಜಿಲ್ಲೆಯಲ್ಲಿ. ಆ ಮಹಾಮಂತ್ರಿ ಜಿಲ್ಲೆ, ರಾಜ್ಯ, ರಾಷ್ಟ್ರದ ಸಮಗ್ರ ಅಭಿವೃದ್ಧಿ ಬಗ್ಗೆ ಯೋಚನೆ ಮಾಡ್ತಾರೆ ಎಂದು ಕಡೂರು ಶಾಸಕ ಬೆಳ್ಳಿ ಪ್ರಕಾಶ್ ಪ್ರತಿಕ್ರಿಯಿಸಿದ್ದಾರೆ.
ಇತಿಹಾಸ ಪ್ರಸಿದ್ಧ ಮದಗದ ಕೆರೆಗೆ ಭಾಗಿಸಿ ಅರ್ಪಿಸಿ ಮಾತನಾಡಿದ ಕಡೂರು ಶಾಸಕ ಬೆಳ್ಳಿ ಪ್ರಕಾಶ್. ಸಂಪುಟ ರಚಿಸುವಾಗ ಚಿಕ್ಕಮಗಳೂರು ಜಿಲ್ಲೆಯನ್ನು ಕಡೆಗಣಿಸಿಲ್ಲ. ಇಡೀ ರಾಷ್ಟ್ರದ ಮಹಾಮಂತ್ರಿ ಇರೋದೇ ನಮ್ಮ ಜಿಲ್ಲೆಯಲ್ಲಿ. ಆ ಮಹಾಮಂತ್ರಿ ಜಿಲ್ಲೆ, ರಾಜ್ಯ, ರಾಷ್ಟ್ರದ ಸಮಗ್ರ ಅಭಿವೃದ್ಧಿ ಬಗ್ಗೆ ಯೋಚನೆ ಮಾಡ್ತಾರೆ. ಸಿ.ಟಿ ರವಿ ಬಿಜೆಪಿ ಪಕ್ಷದ ರಾಷ್ಟ್ರೀಯ ಮಹಾಪ್ರಧಾನ ಕಾರ್ಯದರ್ಶಿಗಳಾಗಿದ್ದಾರೆ, ಅವರ ವಿಶೇಷ ಪ್ರಯತ್ನದಿಂದ ಜಿಲ್ಲೆಯಲ್ಲಿ ಏನು ಬೇಕಾದರೂ ಆಗಬಹುದು ಅನ್ನೋ ಸನ್ನಿವೇಶವಿದೆ. ರಾಜ್ಯದಲ್ಲಿ ಚಿಕ್ಕಮಗಳೂರು ಬಲಿಷ್ಠ ಜಿಲ್ಲೆ ಆಗಿದೆ. ನಾನು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷನಾಗಿದ್ದೇನೆ. ತರೀಕೆರೆ ಶಾಸಕ ಸುರೇಶ್ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿದ್ದಾರೆ. ಪ್ರಾಣೇಶ್ ವಿಧಾನಪರಿಷತ್ ಉಪಸಭಾಪತಿಗಳಾಗಿದ್ದಾರೆ. ಮೂಡಿಗೆರೆ ಶಾಸಕ ಕುಮಾರಸ್ವಾಮಿಗೂ ಅಧಿಕಾರ ಬರುತ್ತೆ. ರಾಜ್ಯದಲ್ಲೇ ಬಲಿಷ್ಠ ಜಿಲ್ಲೆ ನಮ್ಮದು ಅಂತ ಹೆಮ್ಮೆಯಿಂದ ಹೇಳಿಕೊಳ್ಳುತ್ತೇನೆ. ಸಂಪುಟ ರಚನೆ ವೇಳೆ ಸಹಜವಾಗಿ ಕೆಲವರಿಗೆ ಅಸಮಾಧಾನ ಆಗಿದೆ. ಅವರೆಲ್ಲರನ್ನ ಸಮಾಧಾನ ಮಾಡುವ ಶಕ್ತಿ ಪಕ್ಷ, ಮುಖ್ಯಮಂತ್ರಿಗೆ ಇದೆ ಚಿಕ್ಕಮಗಳೂರು ಜಿಲ್ಲೆಗೆ ಅನ್ಯಾಯವಾಗಿಲ್ಲ ಎಂದು ಕಡೂರು ಶಾಸಕ ಬೆಳ್ಳಿ ಪ್ರಕಾಶ್ ಸಮರ್ಥನೆ ನೀಡಿದರು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g