ಒಳಚರಂಡಿ ಕಾಮಗಾರಿಗೆ ಅಸಹಾಯಕತೆ ವ್ಯಕ್ತಪಡಿಸಿದ ಶಾಸಕ ಸಿ.ಟಿ. ರವಿ
1 min readಚಿಕ್ಕಮಗಳೂರು : ನಗರದಲ್ಲಿ ನಡೆಯುತ್ತಿರುವ ಒಳಚರಂಡಿ ಅವ್ಯವಸ್ಥೆಯು ರಾಜ್ಯಾಧ್ಯಂತ ಇದ್ದು ಇದನ್ನು ಸರಿಪಡಿಸಲು ಸಾಧ್ಯವಿಲ್ಲ ಎಂದು ಶಾಸಕ ಸಿ.ಟಿ. ರವಿ ತಮ್ಮ ಅಸಹಾಯಕತೆಯನ್ನು ವ್ಯಕ್ತಪಡಿಸಿದರು.
ಜಿಲ್ಲಾಧಿಕಾರಿಗಳ ಕಛೇರಿ ಯ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ನಗರದಲ್ಲಿ ನಡೆಯುತ್ತಿರುವ ಒಳಚರಂಡಿ ಸಂಪರ್ಕ ಕಾಮಾಗಾರಿಯು ಅವೈಜ್ಞಾನಿಕ ಹಾಗೂ ಅಸಮರ್ಪಕತೆಯಿಂದ ಕೂಡಿದೆ. ಈ ಬಗ್ಗೆ ಹಲವಾರು ಬಾರಿ ಗುತ್ತಿಗೆದಾರರನ್ನು ಕರೆದು ಸಭೆ ನಡೆಸಿದರು ಯಾವುದೇ ಪ್ರಯೋಜನವಾಗಿಲ್ಲ. ಈ ಬಗ್ಗೆ ಹಿಂದಿನ ಮುಖ್ಯಮಂತ್ರಿಗಳ ಗಮನಕ್ಕೂ ತಂದಾಗ ಇದು ನಿಮ್ಮ ಜಿಲ್ಲೆಯಲ್ಲಿ ಮಾತ್ರವಲ್ಲಿ, ನನ್ನ ತವರು ಜಿಲ್ಲೆ ಶಿಕಾರಿಪುರ ಸೇರಿದಂತೆ ರಾಜ್ಯಾಧ್ಯಂತ ಇರುವ ಒಳಚರಂಡಿ ಸಮಸ್ಯೆಯಾಗಿದೆ ಎಂದು ಹೇಳಿದರು. ಒಳ ಚರಂಡಿ ಗುತ್ತಿಗೆದಾರರು ಹೊರ ರಾಜ್ಯದವರಾದವರಿಂದ ಇವರು ಜನಪ್ರತಿನಿಧಿಗಳಿಗೆ ಸೇರಿದಂತೆ ಅಧಿಕಾರಿಗಳಿಗೆ ಚಳ್ಳೆಹಣ್ಣು ತಿನ್ನಿಸುತ್ತಿದ್ದಾರೆ. ಈ ಅವ್ಯವಸ್ಥೆಯ ಒಳಚರಂಡಿ ವ್ಯವಸ್ಥೆಯನ್ನು ಸರಿದಾರಿಗೆ ತರುವುದು ಕಷ್ಟವಾಗಿದೆ ಎಂದು ತಮ್ಮ ಅಸಹಾಯಕತೆಯನ್ನು ವ್ಯಕ್ತಪಡಿಸಿದರು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g