ಶಾಸಕ ಡಿ.ಎಸ್. ಸುರೇಶ್ ನೇತೃತ್ವದಲ್ಲಿ ತಿರಂಗ ಯಾತ್ರೆ ಭದ್ರಾ ಜಲಾಶಯಕ್ಕೆ ಬಾಗಿನ
1 min readತರೀಕೆರೆ : ದೇಶದ 75 ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ತಿರಂಗ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿದ್ದ ಸಂದರ್ಭದಲ್ಲಿ ಭದ್ರಾ ಜಲಾಶಯಕ್ಕೆ ಬಾಗಿನವನ್ನು ತರೀಕೆರೆ ಶಾಸಕ ಡಿ.ಎಸ್. ಸುರೇಶ್ ಬಾಗಿನ ಅರ್ಪಿಸಿದರು.
ದೇಶದ ಪ್ರದಾನಿ ನರೇಂದ್ರ ಮೋದಿಯವರು ಕರೆ ನೀಡಿರುವ ಹರ್ ಘರ್ ತಿರಂಗ ಆಂದೋಲನಕ್ಕೆ ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಬಿಜೆಪಿ ಕಾರ್ಯಾಲಯದಿಂದ ಲಿಂಗದಹಳ್ಳಿ, ತರೀಕೆರೆ, ರಂಗೆನಹಳ್ಳಿ ಮೂಲಕ ಸಾಗಿ ಲಕ್ಕವಳ್ಳಿಯಲ್ಲಿ ಇರುವ ಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಿಸಿದರು.
ಈ ವೇಳೆ ಮಾತನಾಡಿದ ತರೀಕೆರೆ ಶಾಸಕ ಡಿ.ಎಸ್. ಸುರೇಶ್ ತರೀಕೆರೆಯಲ್ಲಿ ಭಾರತೀಯ ಜನತಾ ಪಾರ್ಟಿಯ ಜನಪ್ರತಿನಿಧಿ ಗೆದ್ದು, ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದ ಸಂದರ್ಭದಲ್ಲಿ ಭದ್ರಾ ಜಲಾಶಯ ತುಂಬಿ ಬಾಗಿನ ಅರ್ಪಿಸುತ್ತಿದ್ದೇನೆ. ಇದು ಸಂತೋಷದಾಯಕವಾಗಿದ್ದು, ರೈತರ ಮೊಗದಲ್ಲಿ ಮಂದಹಾಸ ಮೂಡಿದೆ ಎಂದು ಹೇಳಿದರು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g