ನಗರ ಸಾರಿಗೆ ಬಸ್ ಸೇವೆ’ಗೆ ಚಾಲನೆ ನೀಡಿದ ಶಾಸಕ ಹೆಚ್.ಡಿ ತಮ್ಮಯ್ಯ
1 min readಸಾರ್ವಜನಿಕರ ಹಿತದೃಷ್ಟಿಯಿಂದ ಮತ್ತು ನಗರ ಸಾರಿಗೆ ಅವಶ್ಯಕೆತೆಗಾಗಿ, ಇಂದು ಚಿಕ್ಕಮಗಳೂರು ಜಿಲ್ಲೆ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದಲ್ಲಿ ನಗರ ಸಾರಿಗೆ ಬಸ್ ಸೇವೆಗೆ ಚಾಲನೆ ನೀಡಲಾಯಿತು.ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ಶಾಸಕ ಹೆಚ್ .ಡಿ ತಮ್ಮಯ್ಯ, ನಗರ ಸಾರಿಗೆ ಬಸ್ ಸೇವೆಯನ್ನು ಉದ್ಘಾಟಿಸಿ ಮಾತನಾಡಿದ, ಜಿಲ್ಲೆಯ ಜನರಿಗೆ ಇದು ಶುಭದಿನ ಏಕೆಂದರೆ ನಾವು ಜಿಲ್ಲಾ ಪ್ರವಾಸ ಕೈಕೊಂಡ ಸಂದರ್ಭದಲ್ಲಿ ಸಾರ್ವಜನಿಕರು ಇಟ್ಟಿದ್ದಂತಹ ಬೇಡಿಕೆಯನ್ನು ಸರ್ಕಾರ ಮತ್ತು ಕೆ ಎಸ್ ಆರ್ ಟಿ ಸಿ ನಿಗಮದ ಸಹಕಾರದೊಂದಿದೆ ಇಂದು ನಾವು ಪೂರೈಸಿದ್ದೇವೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ನೀಡಿದ ಭರವಸೆಗಳನ್ನು ಈಡೇರಿಸಿದ್ದೇವೆ. ಅದರಂತೆ ಇಂದು ನಗರದ ಜನರಿಗೆ ಸಹಕಾರಿಯಾಗುವ ಉದ್ದೇಶದಿಂದ ನಗರದ ಸಂಚಾರಕ್ಕೆಂದು 4 ಸಾರಿಗೆ ಬಸ್ ಗಳ ವ್ಯವಸ್ಥೆಯನ್ನು ಮಾಡಲಾಗಿದೆ. ಇದರ ಉಪಯೋಗವನ್ನು ಎಲ್ಲಾ ಸಾರ್ವಜನಿಕರು ಪಡೆದುಕೊಳ್ಳಬೇಕು ಎಂದರು. ರಾತ್ರಿ ಹೊತ್ತಿನಲ್ಲಿ ಸಂಚರಿಸುವಂತಹರಿಗೂ ಇದು ಉಪಯೋಗವಾಗಲಿದೆ. ಅಷ್ಟೇ ಅಲ್ಲದೆ ನಗರದಲ್ಲಿ ಸಂಚರಿಸಲು ಸಿದ್ದವಾಗಿರುವ ಬಸ್ ಗಳು ಯಾವ ಮಾರ್ಗವಾಗಿ ಎಷ್ಟು ಗಂಟೆಗೆ ಸಂಚರಿಸುತ್ತದೆ ಎಂಬುವ ನಾಮಫಲಕವನ್ನು ಹಾಕಬೇಕು ಏಕೆಂದರೆ ಇದು ಸಾರ್ವಜನಿಕರ ತಿಳುವಳಿಕೆಗೆ ಸಹಕಾರಿಯಾಗುತ್ತದೆ ಎಂದು ಕೆ ಎಸ್ ಆರ್ ಟಿ ಸಿ ಅಧಿಕಾರಿಗಳಿಗೆ ಸೂಚಿಸಿದರು.ಕೆ ಎಸ್ ಆರ್ ಟಿ ಸಿ ನಿಗಮದ ಡಿ ಸಿ ಬಸವರಾಜ್ ಮಾತನಾಡಿ, ಸಾರ್ವಜನಿಕರ ಒತ್ತಾಯದ ಮೇರೆಗೆ ನಗರ ಸಾರಿಗೆ ಬಸ್ ಸೇವೆಗೆ ಇಂದು ಚಾಲನೆ ಸಿಕ್ಕಿದೆ. ಇದರ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕು. ಈ ಬಸ್ ಗಳು ನಿಲ್ದಾಣದಿಂದ ಪವಿತ್ರವನ- ಮೂಗುತ್ತಿಹಳ್ಳಿ-ಶಿರಗುಂದ ಮಾರ್ಗದಲ್ಲಿ ಸಂಚಾರ ಮಾಡುತ್ತವೆ ಎಂದರು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g