April 28, 2024

MALNAD TV

HEART OF COFFEE CITY

ಶಾಸಕ ಎಂ.ಪಿ. ಕುಮಾರ ಸ್ವಾಮಿ ಹೇಳಿಕೆಗೆ ಶಾಸಕ ಸಿ.ಟಿ. ರವಿ ತಿರುಗೇಟು

1 min read

ಚಿಕ್ಕಮಗಳೂರು : ನಾನು ಬಿಜೆಪಿ ಪಕ್ಷದ ಮಾಲೀಕನಲ್ಲ ನಾನು ಪಕ್ಷದ ಕಾರ್ಯಕರ್ತ.‌ ನಾನು ಯಾವತ್ತೂ ಸಹ ಮಾಲೀಕನ ರೀತಿ ವರ್ತನೆ ಮಾಡಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕ ಸಿಟಿ ರವಿ ಎಂ.ಪಿ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದರು.

 

ಜಿಲ್ಲೆಯಲ್ಲಿ ಶಾಸಕ ಸಿ.ಟಿ‌ ರವಿ ಮೂಗಿನ ನೇರಕ್ಕೆ ಎಲ್ಲವೂ ನಡೆಯುತ್ತಿದೆ ಎಂದು ನೇರವಾಗಿ ಆರೋಪ ಮಾಡಿದ್ದ ಮೂಡಿಗೆರೆ ಶಾಸಕ ಎಂ.ಪಿ ಕುಮಾರಸ್ವಾಮಿ ಹೇಳಿಕೆಗೆ, ನಗರದ ಕಲ್ಯಾಣ ನಗರದಲ್ಲಿ ಓಪನ್ ಜಿಮ್ ಉದ್ಘಾಟನಾ ಸಂದರ್ಭದಲ್ಲಿ ಈ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು,  ನಾನು ಮಂತ್ರಿ ಅಲ್ಲ ನಾನು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಾವ ಹಿನ್ನೆಲೆಯಲ್ಲಿ ಅವರು ಮಾತನಾಡಿದ್ದಾರೆ ಎಂಬುದು ನನಗೆ ಗೊತ್ತಿಲ್ಲ. ವರ್ಗಾವಣೆ ಆದೇಶವನ್ನು ಮಾಡುವ ಅಧಿಕಾರ ನನಗಿಲ್ಲ ಅವರ ಜೊತೆ ನಾನು ಮಾತನಾಡುತ್ತೇನೆ ಎಂದರು. ರಾಜಕಾರಣದ ಸೂಕ್ಷ್ಮಗಳು ನನಗೆ ಅರ್ಥವಾಗುತ್ತದೆ ಯಾವ ಸಂದರ್ಭದಲ್ಲಿ ಸಾರ್ವಜನಿಕವಾಗಿ ಉತ್ತರಿಸಬೇಕು ಆಗ ಇದಕ್ಕೆ ಉತ್ತರಿಸುತ್ತೇನೆ.  ವರ್ಗಾವಣೆ ಮಾಡುವುದು ನನ್ನ ಕೆಲಸ ಅಲ್ಲ,  ವರ್ಗಾವಣೆ ಶಿಫಾರಸ್ಸು ಯಾರು ಬಂದರು ಕೊಡುತ್ತೇನೆ ವರ್ಗಾವಣೆ ಮಾಡುವುದು ಸಂಬಂಧಪಟ್ಟ ಆಯಾ ಇಲಾಖೆಯ ಸಚಿವರು ಹಾಗೂ ಮುಖ್ಯಮಂತ್ರಿಗಳಿಗೆ ಬಿಟ್ಟಿದ್ದು ಎಂದರು. ಶಾಸಕ ಸಿಟಿ ರವಿ ಪ್ರತಿಕ್ರಿಯೆ ನೀಡಿದರು.

 

 

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!