April 29, 2024

MALNAD TV

HEART OF COFFEE CITY

ಸಖರಾಯಪಟ್ಟಣದಲ್ಲಿ ಉದ್ಘಾಟನೆಗೊಂಡ ಶಾಸಕರ ಜನಸ್ಪಂದನ ಕಚೇರಿ

1 min read

ಚಿಕ್ಕಮಗಳೂರು : ಚಿಕ್ಕಮಗಳೂರು ವಿಧಾನ ಸಭಾ ಕ್ಷೇತ್ರದ ಶಾಸಕರ ಜನಸ್ಪಂದನ ಕಛೇರಿಗೆ ಸಖರಾಯಪಟ್ಟಣದಲ್ಲಿ ಇಂದು ಶಾಸಕ ಹೆಚ್.ಡಿ. ತಮ್ಮಯ್ಯ ವಿದ್ಯುಕ್ತ ಚಾಲನೆ ನೀಡಿದರು.ಸಖರಾಯಪಟ್ಟಣದ ಹೋಬಳಿಯ ಭಾಗದ ಜನರಿಗೆ ಚಿಕ್ಕಮಗಳೂರು ತಾಲೂಕು ಕೇಂದ್ರಕ್ಕೆ ಬರಲು ತಾಸ್ರದಾಯಕವಾಗುವುದೆಂದು ಶಾಸಕ ಎಚ್.ಡಿ. ತಮ್ಮಯ್ಯ ಸಖರಾಯಪಟ್ಟಣದಲ್ಲೂ ಶಾಸಕರ ಜನಸ್ಪಂದನ ಕಛೇರಿಯನ್ನು ತೆರಿದ್ದಾರೆ. ಸಖರಾಯಪಟ್ಟಣದಲ್ಲಿ ಶಾಸಕರ ಪ್ರತಿನಿಧಿಯಾಗಿ ಕೆಲಸ ಮಾಡುವ ಶಾಸಕರ ಜನಸ್ಪಂಧನ ಕಛೇರಿಗೆ ಶಾಸ್ತೋಕ್ತವಾಗಿ ಚಾಲನೆ ನೀಡಿದರು. ಕಛೇರಿಯನ್ನು ರಿಬ್ಬನ್ ಕತ್ತರಿಸುವ ಮೂಲಕ ಚಾಲನೆ ನೀಡಿದ ಶಾಸಕರು, ನಂತರ ವೇದಘೋಷಗಳೊಂದಿಗೆ ಅಮ್ಮನವರಿಗೆ ಪೂಜೆ ಸಲ್ಲಿಸಿ, ಯಾವ ವಿಘ್ನಗಳು ಬಾರದೆ ನಿರ್ವಿಘ್ನವಾಗಿ ಜನರ ಸಮಸ್ಯೆಗಳಿಗೆ ಸ್ಪಂಧಿಸುವಂತೆ ಪ್ರಾರ್ಥಿಸಿ ಪೂಜೆ ಸಲ್ಲಿಸಿದರು.

ಈ ವೇಳೆ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ.ಕೆ.ಪಿ ಅಂಶುಮಂತ್ ಅಂಶುಪಂತ್, ಸಖರಾಯಪಟ್ಟಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಡಿಮನೆ ಸತೀಶ್, ಚಿಕ್ಕಮಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜೇಗೌಡ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಬಿ.ಎಂ. ಸಂದೀಪ್, ವಿಧಾನ ಪರಿಷತ್ ಮಾಜಿ ಸದಸ್ಯೆ ಎ.ವಿ ಗಾಯತ್ರಿ ಶಾಂತೇಗೌಡ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ.ಸಿ ಶಿವಾನಂದಸ್ವಾಮಿ ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!