May 19, 2024

MALNAD TV

HEART OF COFFEE CITY

ಗ್ಯಾಸ್ ಏಜೆನ್ಸಿಗಳಿಂದ ನಿಗಧಿಗಿಂತ ಹೆಚ್ಚು ಹಣ ವಸೂಲಿ, ಕರವೇ ಪ್ರತಿಭಟನೆ

1 min read

 

ಚಿಕ್ಕಮಗಳೂರು: ಜಿಲ್ಲೆಯ ಗ್ಯಾಸ್ ಏಜೆನ್ಸಿಯ ಮಾಲೀಕರು ಸರ್ಕಾರದ ನಿಗಧಿಪಡಿಸಿದ್ದಕ್ಕಿಂತ ಹೆಚ್ಚು ಹಣವನ್ನು ವಸೂಲಿ ಮಾಡುತ್ತಿದ್ದು, ಜೊತೆಗೆ ಸರಬರಾಜು ವೆಚ್ಚವನ್ನು ಕೂಡ ಮನಸ್ಸಿಗೆ ಬಂದಂತೆ ಹಣ ವಸೂಲಿ ಮಾಡುತ್ತಿದ್ದು ಈ ಬಗ್ಗೆ ಜಿಲ್ಲಾಡಳಿತ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಕರೆವೇ ಕಾರ್ಯಕರ್ತರು ಆಗ್ರಹಿಸಿದರು.

 

ನಗರದ ಹನುಮಂತಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು ಸಾರ್ವಜನಿಕರಿಂದ ಹೆಚ್ಚು ಹಣ ವಸೂಲಿ ಮಾಡುತ್ತಿರುವ ಗ್ಯಾಸ್ ಏಜೆನ್ಸಿಗಳ ವಿರುದ್ಧ ಸೂಕ್ತ ಕ್ರಮ‌ಜರುಗಿಸುವಂತೆ ಒತ್ತಾಯಿಸಿದರು.

 

ಈ ವೇಳೆ ಮಾತನಾಡಿದ ಕರವೇ ಜಿಲ್ಲಾಧ್ಯಕ್ಷ ತೇಗೂರು ಜಗದೀಶ್, ಈ ವಿಚಾರವಾಗಿ ಜಿಲ್ಲಾಧಿಕಾರಿಗಳು, ಆಹಾರ ಮತ್ತು ನಾಗರೀಕರ ಸರಬರಾಜು ಇಲಾಖೆ ಅಧಿಕಾರಿಗಳ ಗಮನಕ್ಕೆ ತಂದರು ಯಾವುದೇ ಪ್ರಯೋಜನವಾಗಿರುವುದಿಲ್ಲ. ಕೇವಲ ಅಧಿಕಾರಿಗಳು ನೋಟೀಸ್ ನೀಡುವ ಮೂಲಕ ಸುಮ್ಮನಾಗಿದ್ದಾರೆ ಆದ್ದರಿಂದ ಈ ಕೂಡಲೇ ಸಂಬಂಧಪಟ್ಟ ಗ್ಯಾಸ್ ಏಜೆನ್ಸಿಗಳ ಮೇಲೆ ಕ್ರಮ ಜರುಗಿಸಬೇಕು ಹಾಗೂ ಅಜ್ಜಂಪುರದಲ್ಲಿರುವ ಸಿ.ಎಸ್.ಆರ್. ಗ್ಯಾಸ್ ಏಜೆನ್ಸಿಯ ಮಾಲೀಕರು ಅಲ್ಲಿನ ಜನರಿಗೆ ದಬ್ಬಾಳಿಕೆ ಮೂಲಕ ನಿಯಮವನ್ನು ಗಾಳಿಗೆ ತೂರಿ ಹೆಚ್ಚಿಗೆ ಹಣವನ್ನು ವಸೂಲಿ ಮಾಡುತ್ತಿದ್ದು, ಈ ವಿಚಾರವನ್ನು ಕೇಳಲು ಹೋದ ಸಾರ್ವಜನಿಕರಿಗೆ ಅವಾಚ್ಯ ಶಬ್ದಗಳಿಂದ ನಿಂಧಿಸಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದರು.

 

ಸಾರ್ವಜನಿಕರಿಗೆ ಅವಾಚ್ಯ ಶಬ್ದಗಳಿಂದ ನಿಂಧಿಸಿ, ಹಲ್ಲೆ ಮಾಡಿ, ದೌಜನ್ಯದಿಂದ ಹಣ ಪಡೆಯುತ್ತಿರುವ ಮಾಲೀಕರಾದ ಗುರುಮೂರ್ತಿಯವರ ಮೇಲೆ ಕಾನೂನು ರೀತಿಯ ಕ್ರಮ ಜರುಗಿಸಿ, ಕ್ರಿಮಿನಲ್ ಮೊಕದ್ದಮೆ ಹಾಕಿ ಕೂಡಲೇ ಬಂಧಿಸಬೇಕು ಹಾಗೂ ಅವರ ಏಜೆನ್ಸಿ ಪರವಾನಗಿಯನ್ನು ರದ್ದು ಪಡಿಸಬೇಕೆಂದು ಇದೇ ವೇಳೆ ಆಗ್ರಹಿಸಿಸಿದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!