ಪ್ರಚಾರಕ್ಕೆ ಹೋಗುತ್ತಿಲ್ಲ ಎನ್ನುವವರಿಗೆ ಪ್ರಚಾರದ ಮೂಲಕವೇ ಉತ್ತರ ಕೊಟ್ಟ ಎಂ.ಪಿ.ಕೆ
1 min read
ಚುನಾವಣೆಯಲ್ಲಿ ಸಕ್ರಿಯರಾಗಿಲ್ಲ ಎಂಬ ಬಿಜೆಪಿ ಆರೋಪಕ್ಕೆ ಮಾಜಿ ಶಾಸಕ ಎಂ.ಪಿ ಕುಮಾರಸ್ವಾಮಿ ಭರ್ಜರಿ ಪ್ರಚಾರದ ಮೂಲಕ ಉತ್ತರ ಕೊಟ್ಟಿದ್ದಾರೆ. ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಅವರು ಮೂಡಿಗೆರೆ ಕ್ಷೇತ್ರದ ಗ್ರಾಮ ಗ್ರಾಮಗಳ ಪ್ರವಾಸದಲ್ಲಿ ತೊಡಗಿ ಜಯಪ್ರಕಾಶ್ ಹೆಗ್ಡೆಯವರಿಗೆ ಶತಾಯಗತಾಯ ಲೀಡ್ ಕೊಡಿಸುತ್ತೇನೆ ಎನ್ನುತ್ತಿದ್ದಾರೆ
ಅಳೆದು ತೂಗಿ ಕಾಂಗ್ರೆಸ್ ಸೇರ್ಪಡೆ ಆಗಿರುವ ಮೂಡಿಗೆರೆ ಮಾಜಿ ಶಾಸಕ ಎಂ.ಪಿ ಕುಮಾರಸ್ವಾಮಿ ಪ್ರಚಾರಕ್ಕೆ ಹೋಗುತ್ತಿಲ್ಲ ಎಂಬ ಆರೋಪ ಕೇಳಿ ಬಂದಿತ್ತು. ಆದರೆ ಇದನ್ನು ಸುಳ್ಳಾಗಿಸಿರುವ ಕುಮಾರಸ್ವಾಮಿ ಕ್ಷೇತ್ರದ ಸುತ್ತ ಸುತ್ತಾಡುತ್ತಿದ್ದಾರೆ. ಬೆಂಬಲಿಗರ ಜೊತೆ ಸೇರಿ ಹಲವು ಹಳ್ಳಿಗಳ ಪ್ರವಾಸ ಮಾಡುತ್ತಿದ್ದಾರೆ. ಮೂಡಿಗೆರೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ವಸ್ತಾರೆ, ಅಂಬಳೆ, ಆಲ್ದೂರು, ಆವುತಿ ಸೇರಿದಂತೆ ಹಲವು ಹೋಬಳಿಗಳ ಗ್ರಾಮಗಳಿಗೆ ಭೇಟಿ ನೀಡಿ ಮತಪ್ರಚಾರ ಮಾಡುತ್ತಿದ್ದಾರೆ. ಅಷ್ಟೇ ಅಲ್ಲದೆ ಕ್ಷೇತ್ರ ವ್ಯಾಪ್ತಿ ಮೀರಿ ಶೃಂಗೇರಿ ವಿಧಾನಸಭಾ ಕ್ಷೇತ್ರದ ಕಡವಂತಿ ಭಾಗದಲ್ಲಿ ದಲಿತ ಸಂಘಟನೆಗಳ ಮುಖಂಡರೊಂದಿಗೆ ಹಾಗೂ ನೂರಾರು ಪರಿಶಿಷ್ಟರ ಜೊತೆ ಸಂವಾದ ನಡೆಸಿ ಜಯಪ್ರಕಾಶ್ ಹೆಗ್ಡೆ ಯವರಿಗೆ ಮತ ಹಾಕುವಂತೆ ಮನವಿ ಮಾಡಿದ್ದಾರೆ. ನಾನು ಪ್ರಚಾರಕ್ಕೆ ಹೋಗುತ್ತಿಲ್ಲ ಎಂಬುವವರಿಗೆ ತಕ್ಕ ಉತ್ತರ ಕೊಡುತ್ತೇನೆ ಎನ್ನುತ್ತಿರುವ ಅವರು ಮೂಡಿಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಖಚಿತವಾಗಿಯೂ ಜಯಪ್ರಕಾಶ್ ಹೆಗ್ಡೆಯವರಿಗೆ ಲೀಡ್ ಕೊಡಿಸುತ್ತೇನೆ ಎಂದು ಎಂ.ಪಿ ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g