April 29, 2024

MALNAD TV

HEART OF COFFEE CITY

ಮೂಡಿಗೆರೆ: ಕಾಡಾನೆ ಸೆರೆ ಕಾರ್ಯಚರಣೆ ದಿಢೀರ್ ಸ್ಥಗಿತ..!

1 min read

ಚಿಕ್ಕಮಗಳೂರು: ಕಾಫಿನಾಡಲ್ಲಿ ಕಾಡಾನೆ ಸೆರೆ ಕಾರ್ಯಚರಣೆ ದಿಢೀರ್ ಸ್ಥಗಿತಗೊಂಡಿದೆ. ಮೈಸೂರು ದಸರಾ ದಲ್ಲಿ 9 ಬಾರಿ ಅಂಬಾರಿ ಹೊತ್ತು ಇತಿಹಾಸ ಸೃಷ್ಟಿಸಿದ ಅರ್ಜುನ ಆನೆ ಮೃತಪಟ್ಟ ಹಿನ್ನೆಲೆ ಕಾರ್ಯಚರಣೆ ಸ್ಥಗಿತವಾಗಿದೆ.

ಮೈಸೂರು ದಸರಾದಲ್ಲಿ ಅಂಬಾರಿ ಹೊತ್ತು ನಾಡಿನ ಜನರ ಗಮನ ಸೆಳೆದಿದ್ದ ಅರ್ಜುನ ಆನೆ ಸಾವಿನಿಂದ ತೀವ್ರ ದುಃಖದಲ್ಲಿರುವ ಜಿಲ್ಲೆಯ ಮಾವುತರು ಹಾಗೂ ಕಾವಡಿಗರು ಕರ್ತವ್ಯಕ್ಕೆ ಗೈರಾಗಿರುವ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನ ಮೂಡಿಗೆರೆಯ ಕಾಡಾನೆ ಸೆರೆ ಕಾರ್ಯಾಚರಣೆ ಸ್ಥಗಿತವಾಗಿದೆ. ಇದೇ ರೀತಿ ಕಾಡಾನೆ ಸೆರೆ ಕಾರ್ಯಚರಣೆ ವೇಳೆ ಅರ್ಜುನ ಸಾವಿನಿಂದ ಆತಂಕದಲ್ಲಿರುವ ಅರಣ್ಯ ಇಲಾಖೆ ಸಿಬ್ಬಂದಿಗಳು ಕೆಲಸಕ್ಕೆ ತೆರಳದೆ ತೀವ್ರ ಬೇಸರದಲ್ಲಿದ್ದಾರೆ. ಇದರಿಂದಾಗಿ ಮೂಡಿಗೆರೆ ತಾಲೂಕಿನ ಬೈರಾಪುರ ಬಳಿ ನಡೆಯುತ್ತಿದ್ದ ಕಾಡಾನೆ ಸೆರೆ ಕಾರ್ಯಚರಣೆ ದಿಢೀರ್ ನಿಂತು ಹೋಗಿದೆ. ಕಾಡಾನೆ ಸೆರೆ ಕಾರ್ಯಚರಣೆಗಾಗಿ ಶಿಬಿರದಿಂದ ಬಂದಿದ್ದ 6 ಸಾಕಾನೆಗಳು ಸಹಾ ಮಾವುತರಿಲ್ಲದೆ ಇಂದು ತಮ್ಮ ಕರ್ತವ್ಯವನ್ನು ಮಾಡದಂತಾಗಿದೆ. 6 ಸಾಕಾನೆಗಳ ಬಳಸಿ ಕಾಡಾನೆ ಸೆರೆಗೆ ಚಿಕ್ಕಮಗಳೂರು ಅರಣ್ಯ ಇಲಾಖೆ ಮುಂದಾಗಿತ್ತು ಇದರಲ್ಲಿ ದಸರಾ ಗಜಪಡೆಯ ಮಹೇಂದ್ರ, ಗಜೇಂದ್ರ, ನೇತೃತ್ವ ವಹಿಸಿದ್ದವು. ಮೂಡಿಗೆರೆ ಸುತ್ತಮುತ್ತ ತೀವ್ರ ಉಪಟಳ ನೀಡುತ್ತಿದ್ದ ಆನೆಗಳ ಹಾವಳಿಯಿಂದಾಗಿ ಬೈರಾಪುರದ ಬಳಿ 3 ಕಾಡಾನೆಗಳ ಸೆರೆಗಾಗಿ ಕಾರ್ಯಾಚರಣೆ ನಡೆಯುತ್ತಿದ್ದು ಅರ್ಜುನನ ಅಕಾಲಿಕ ಮರಣದಿಂದ ಸದ್ಯ ಎಲ್ಲಾ ಚಟುವಟಿಕೆಗಳು ಸ್ಥಗಿತಗೊಂಡಿದೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!