May 19, 2024

MALNAD TV

HEART OF COFFEE CITY

ನಗರಸಭೆ ಚುನಾವಣೆ; ಕಾಂಗ್ರೆಸ್‌ನಿಂದ ಟಿಕೇಟ್ ಮಾರಾಟ ಆರೋಪ

1 min read

ಚಿಕ್ಕಮಗಳೂರು: ನಗರಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಹಣಕ್ಕಾಗಿ ಕೆಲ ವಾರ್ಡ್ಗಳ ಟಿಕೇಟ್‌ಗಳನ್ನು ಮಾರಾಟ ಮಾಡಲಾಗಿದೆ ಎಂದು ಮಾನವ ಸಂರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಹಾಗೂ ಕಾಂಗ್ರೆಸ್ ಎಸ್.ಸಿ ಘಟಕದ ಮಾಜಿ ಅಧ್ಯಕ್ಷ ಹೊನ್ನೇಶ್ ಆರೋಪಿಸಿದ್ದಾರೆ.

ನಗರದ ಪ್ರೆಸ್‌ಕ್ಲಬ್‌ನಲ್ಲಿ ಈ ಕುರಿತು ಮಾತನಾಡಿದ ಅವರು, ನಗರಸಭಾ ವ್ಯಾಪ್ತಿಯ ೩೫ ವಾರ್ಡ್ಗಳಲ್ಲಿ ೬ ಮೀಸಲು ಕ್ಷೇತ್ರಗಳಿದ್ದು ಈ ಕ್ಷೇತ್ರಗಳಲ್ಲಿ ಮೂಲ ಅಸ್ಪೃಶ್ಯರಿಗೆ ಕಾಂಗ್ರೆಸ್ ಪಕ್ಷದಿಂದ ಟಿಕೇಟ್ ವಂಚನೆಯಾಗಿದೆ. ಕ್ಷೇತ್ರದಲ್ಲಿ ಕಳೆದ ೭೦ ವರ್ಷಗಳಿಂದ ಕಾಂಗ್ರೆಸ್ ಪಕ್ಷವನ್ನು ೬೫ ಸಾವಿರ ದಲಿತ ಸಮುದಾಯವರು ಬೆಂಬಲಿಸಿಕೊಂಡು ಬರುತ್ತಿದ್ದು ಈ ವರೆಗೆ ದಲಿತರಿಗೆ ಪಕ್ಷದಲ್ಲಿ ಯಾವುದೇ ಅಧಿಕಾರ ನೀಡಿಲ್ಲ ಎಂದು ದೂರಿದರು.

ಕಳೆದ ೧೫ ವರ್ಷಗಳಿಂದ ಬೂತ್ ಮಟ್ಟದಿಂದ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಈಗ ಎಸ್.ಸಿ ಘಟಕದ ಅಧ್ಯಕ್ಷನಾಗಿ ಕಾರ್ಯನಿರ್ವಹಿಸುತ್ತಿದ್ದು ನಗರಸಭೆ ಚುನಾವಣೆಯಲ್ಲಿ ನಾನು ವಾಸ ಮಾಡುವ ೧೮ನೇ ವಾರ್ಡ್ನಿಂದ ಸ್ಪರ್ಧೆ ಮಾಡಲು ಇಚ್ಚಿಸಿದ್ದು ಆದರೆ ಬೆಂಗಳೂರಿನ ವಾಸಿಯಾದ ಕುಮಾರ್ ಎಂಬುವರ ಪತ್ನಿಗೆ ಟಿಕೇಟ್ ನೀಡುವ ಮೂಲಕ ಹಣದ ಆಸೆಗೆ ಕೆಲ ಸ್ಥಳೀಯ ನಾಯಕರು ಟಿಕೇಟ್ ಮಾರಿಕೊಂಡಿದ್ದಾರೆ ಎಂದು ಆರೋಪಿಸಿದ ಅವರು ಇದರಿಂದ ಮನನೊಂದು ಕಾಂಗ್ರೆಸ್ ಪಕ್ಷದ ಎಲ್ಲಾ ನನ್ನ ಸ್ಥಾನಮಾನಗಳಿಗೆ ರಾಜೀನಾಮೆ ನೀಡುವುದಾಗಿ ತಿಳಿಸಿದರು.

ಕಳೆದ ೨೦೦೮ರ ನಗರಸಭೆ ಚುನಾವಣೆಯಲ್ಲಿ ಎಐಸಿಸಿ ಕಾರ್ಯದರ್ಶಿ ಬಿ.ಎಂ ಸಂದೀಪ್ ಗೆಲುವಿಗೆ ನಾವು ಶ್ರಮಿಸಿದ್ದೇವೆ ಆದರೆ ಅವರು ಟಿಕೇಟ್ ಕೊಡಿಸುವ ಭರವಸೆ ನೀಡಿ ಈಗ ವಂಚಿಸಿದ್ದಾರೆ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಿಕೆ ಕರೆ ಮಾಡಿದರೆ ನನ್ನ ದೂರವಾಣಿ ಕರೆಯನ್ನು ಸ್ವೀಕರಿಸುತ್ತಿಲ್ಲ ಎಂದು ಆರೋಪಿಸಿದರು.

ಈ ವೇಳೆ ಮಾನವ ಸಂರಕ್ಷಣಾ ವೇದಿಕೆ ಕಾರ್ಯದರ್ಶಿ ಕುಮಾರ್, ಉಪಾಧ್ಯಕ್ಷ ಧರ್ಮೇಶ್ ಇದ್ದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!