ನಗರಸಭೆ ಚುನಾವಣೆ: ನನ್ನ ಬಗ್ಗೆ ಅಪಪ್ರಚಾರ ಮಾಡಿ ಗೆಲುವು_ ಕೆ.ಆರ್ ಲೀಲಾ
1 min readಚಿಕ್ಕಮಗಳೂರು: ಈ ಬಾರಿಯ ನಗರಸಭೆ ಚುನಾವಣೆಯಲ್ಲಿ ನನ್ನ ಬಗ್ಗೆ ಅಪಪ್ರಚಾರ ನಡೆಸಿ ಗೆಲುವು ಸಾಧಿಸಿದ್ದು, ಇಂತಹ ಅಪಪ್ರಚಾರದಿಂದ ನನ್ನ ಹೋರಾಟವನ್ನು ಹತ್ತಿಕ್ಕಲು ಸಾಧ್ಯವಿಲ್ಲ ಎಂದು ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಪಕ್ಷೇತರ ಅಭ್ಯರ್ಥಿ ಕೆ.ಆರ್.ಲೀಲಾ ಹೇಳಿದರು.
ಗುರುವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನಗರಸಭೆ ಚುನಾವಣೆಯಲ್ಲಿ ನನ್ನ ನ್ನು ಸೋಲಿಸುವ ಉದ್ದೇಶದಿಂದ ನನ್ನ ಮೇಲೆ ಇಲ್ಲಸಲ್ಲದ ಆರೋಪಗಳನ್ನು ಮಾಡಿದ್ದು ಅಲ್ಲದೇ ಕರಪತ್ರಗಳನ್ನು ಮುದ್ರಿಸಿ ಹಂಚಿದ್ದಾರೆ. ಕರಪತ್ರದಲ್ಲಿ ಕೋಟ್ಯಾಂತರ ರೂ. ಆಸ್ತಿ ಹೊಂದಿದ್ದಾರೆ. ಕಟ್ಟಡಗಳನ್ನು ಹೊಂದಿದ್ದಾರೆ ಎಂದು ಆರೋಪಿಸಿದ್ದು, ಇವರ ಆರೋಪಗಳ ನ್ನು ಸಾಭೀತುಪಡಿಸಿದಲ್ಲಿ, ನನ್ನ ಬಳಿ ಒಂದು ತುಂಡುಭೂಮಿ ಇದೆ ಎಂದು ಸಾಭೀತು ಮಾಡಿದಲ್ಲಿ ಆರೋಪ ಮಾಡಿದವರ ಮನೆಯಲ್ಲಿ ಜೀತದಾಳಾಗಿ ಕೆಲಸ ಮಾಡುತ್ತೇನೆ ಎಂದು ಸವಾಲು ಹಾಕಿದರು.
ಗೌರಿಕಾಲುವೆಯಲ್ಲಿ ಪ್ರತಿಷ್ಠಿತ ವ್ಯಕ್ತಿಯೊಬ್ಬರಿಗೆ ಅಕ್ರಮವಾಗಿ ನಿವೇಶನ ನೀಡುವುದನ್ನು ಅನೇಕ ದಿನಗಳ ಕಾಲ ಹೋರಾಟ ಮಾಡಿ ತಡೆದಿದ್ದೇನೆ. ಗೌರಿ ಕಾಲುವೆ ಕರಾಬ್ ಭೂಮಿ ಹಣವಂತರ ಕೈಸೇರುವುದನ್ನು ತಪ್ಪಿಸಿ ಬಡವರಿಗೆ ನಿವೇಶನ ಮಾಡಿಕೊಡಲು ಅನೇಕ ವರ್ಷ ಗಳ ಕಾಲ ನ್ಯಾಯಾಲಯದಲ್ಲಿ ಹೋರಾಟ ನಡೆಸಿದ್ದೇನೆ. ನನ್ನ ವಾರ್ಡಿನ ಜನರ ಕಷ್ಟಸುಖಕ್ಕೆ ಸ್ವಂಧಿಸಿದ್ದೇನೆ. ಚುನಾವಣೆಯಲ್ಲಿ ನನ್ನನ್ನು ನೇರವಾಗಿ ಸೋಲಿಸಲು ಸಾಧ್ಯವಿಲ್ಲ ಎಂದು ಅರಿತ ಕೆಲವರು ನಮ್ಮ ಮೇಲೆ ಇಲ್ಲಸಲ್ಲದ ಅಪಪ್ರಚಾರ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿ ಸಿದರು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g