‘ನನ್ನ ದೇಶ ನನ್ನ ಮಣ್ಣು’ ಅಭಿಯಾನ
1 min readಚಿಕ್ಕಮಗಳೂರು : ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಯುವ ಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಐ.ಡಿ.ಎಸ್.ಜಿ. ಕಾಲೇಜ್, ಅಂಗನವಾಡಿ ಕಾರ್ಯಕರ್ತೆಯರು ನರ್ಸಿಂಗ್ ಕಾಲೇಜ್ ವಿದ್ಯಾರ್ಥಿಗಳು ಇವರುಗಳ ಸಂಯುಕ್ತಾಶ್ರಯದಲ್ಲಿ ಕೇಂದ್ರ ಸರ್ಕಾರ ಕರೆ ನೀಡಿರುವ ನನ್ನ ದೇಶ ನನ್ನ ಮಣ್ಣು ಅಭಿಯಾನದ ಅಂಗವಾಗಿ ತಾಲೂಕು ಕಛೇರಿಯಿಂದ ಕುವೆಂಪು ಕಲಾಮಂದಿರದವರೆಗೆ ಜಾಥವನ್ನು ಹಮ್ಮಿಕೊಳ್ಳಲಾಗಿತ್ತು.
ನನ್ನ ದೇಶ ನನ್ನ ಮಣ್ಣು ಅಭಿಯಾನದ ಅಂಗವಾಗಿ ಮುಖ್ಯರಸ್ತೆಯಲ್ಲಿ ನಡೆದ ಜಾಥದಲ್ಲಿ ಸ್ಥಳೀಯ ಶಾಸಕ ಹೆಚ್.ಡಿ. ತಮ್ಮಯ್ಯ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ|| ಬಿ. ಗೋಪಾಲ್ ಕೃಷ್ಣ, ನಗರಸಭೆ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್, ಪೌರಾಯುಕ್ತಾ ಬಿ.ಸಿ. ಬಸವರಾಜ್ ಮುಂತಾದವರು ಭಾಗವಹಿಸಿದ್ದರು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g