ನಾಗೇಶ್ ಕೊಲೆ ಪ್ರಕರಣ, ಬಂಧಿನ ಕೃಷ್ಣೇಗೌಡನ ಮನೆಯಲ್ಲಿ ಸಿಗ್ತು ಲಕ್ಷಾಂತರ ಬೆಲೆಯ ನಾಟ
1 min readಕೊಟ್ಟಿಗೆಹಾರ: ನಾಪತ್ತೆಯಾದ ವ್ಯಕ್ತಿಯನ್ನು ಹುಡುಕಲು ಹೋದಾಗ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಲಕ್ಷಾಂತರ ಬೆಲೆಬಾಳುವ ಮರ ಪತ್ತೆಯಾದ ಘಟನೆ ಬಿದಿರುತಳದಲ್ಲಿ ನಡೆದಿದೆ.
ಬಾಳೂರು ಗ್ರಾಮದ ನಾಗೇಶ್ ಆಚಾರ್ ಎಂಬುವವರು ಬಿದಿರುತಳ ಗ್ರಾಮದಿಂದ ಕೆಲದಿನಗಳ ಹಿಂದೆ ನಾಪತ್ತೆಯಾಗಿದ್ದು ಬಿದಿರುತಳಕ್ಕೆ ಅರಣ್ಯ ಅಧಿಕಾರಿಗಳು ಹುಡುಕಲು ಹೋದ ಸಂದರ್ಭದಲ್ಲಿ ಬಿದಿರುತಳದ ಕೃಷ್ಣೆಗೌಡ ಅವರಿಗೆ ಸೇರಿದ ಮನೆಯಲ್ಲಿ ಮರವನ್ನು ಅಡಗಿಸಿಟ್ಟಿರುವುದು ಬೆಳಕಿಗೆ ಬಂದಿದೆ. ಈ ಸಂಬoಧ ಕೃಷ್ಣೆಗೌಡ ಅವರ ಮೇಲೆ ಅವರ ಮೇಲೆ ಅರಣ್ಯ ಅಧಿಕಾರಿಗಳು ಪ್ರಕರಣ ದಾಖಲಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಉಪವಲಯ ಅರಣ್ಯಾಧಿಕಾರಿ ಬಸವರಾಜ್, ಅರಣ್ಯ ರಕ್ಷಕ ಪರಮೇಶ್ ಇದ್ದರು.
ಲಕ್ಷಾಂತರ ರೂ ಬೆಲೆಬಾಳುವ ಮರಗಳ ಸಂಗ್ರಹ ಮಾಡಿದ್ದರೂ ಕೂಡ ಅರಣ್ಯ ಅಧಿಕಾರಿಗಳು, ಸಿಬ್ಬಂದಿಗಳ ಗಮನಕ್ಕೆ ಬಾರದೇ ಇರುವುದು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಈ ಬಗ್ಗೆ ಸಮಗ್ರ ತನಿಖೆಯಾಗಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g