ನಾರಿಶಕ್ತಿ ಸಂಗಮ, ಸಮರ್ಪಣ ಟ್ರಸ್ಟ್ ವತಿಯಿಂದ: ಮಹಿಳಾ ಸಮ್ಮೇಳನ
1 min readಚಿಕ್ಕಮಗಳೂರು: ನಾರಿಶಕ್ತಿ ಸಂಗಮ, ಸಮರ್ಪಣ ಟ್ರಸ್ಟ್ ವತಿಯಿಂದ ಮಹಿಳೆಯರಿಗಾಗಿ ಸಮ್ಮೇಳನ ಆಯೋಜಿಸಲಾಗಿದೆ ಎಂದು ಕಾರ್ಯಕ್ರಮ ಸಹ ಸಂಯೋಜಕಿ ವಾಣಿ ನಾಗೇಶ್ ತಿಳಿಸಿದರು. ನವೆಂಬರ್ 26 ಗಾಯಿತ್ರಿ ಕಲ್ಯಾಣ ಮಂಟಪದಲ್ಲಿ ನಾರಿಶಕ್ತಿ ಸಂಗಮ ಹಾಗೂ ಸಮರ್ಪಣ ಟ್ರಸ್ಟ್ ವತಿಯಿಂದ ಸಮ್ಮೇಳನ ಹಮ್ಮಿಕೊಂಡಿದ್ದು, ಮಹಿಳೆಯರಲ್ಲಿ ಜಾಗೃತಿ ಮೂಡಿಸಲು ಕಾರ್ಯಕ್ರಮ ಆಯೋಜಿಸಲಾಗಿದೆ. ರಾಷ್ಟ್ರೀಯ ಚಿಂತನೆ, ಸಾಮಾಜಿಕ ಸಾಮರಸ್ಯ, ಮಹಿಳಾ ಸುರಕ್ಷೆ, ಗ್ರಾಮೀಣ, ಕೃಷಿ ಇತ್ಯಾದಿ ವಿಚಾರಗಳ ಬಗ್ಗೆ ಈ ಸಮ್ಮೇಳನ ಬೆಳಕು ಚೆಲ್ಲಲಿದ್ದು ನಡೆಯುವ ಈ ಸಮ್ಮೇಳನದಲ್ಲಿ 1500 ಮಹಿಳೆಯರು ಭಾಗವಹಿಸಲಿದ್ದು, ಕಾರ್ಯಕ್ರಮ ಪೂರ್ವಭಾವಿಯಾಗಿ ತಾಲೂಕು, ನಗರ ಹಾಗು ಜಿಲ್ಲಾ ಮಟ್ಟಗಳಲ್ಲಿ ಪೂರ್ವಭಾವಿ ಸಭೆಗಳನ್ನು ನಡೆಸಲಾಗಿದ್ದು, ಸ್ವಾತಂತ್ರ್ಯ ಪೂರ್ವದಲ್ಲಿ ಹೋರಾಟ ಮಾಡಿದ ವೀರ ಮಹಿಳೆಯರ ಹಾಗು ಸ್ವಾತಂತ್ರ್ಯ ನಂತರ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದಂತಹ ಮಹಿಳಾ ಸಾಧಕಿಯರ ಚಿತ್ರ ಪ್ರದರ್ಶನ ಸಹಾ ಇರುತ್ತದೆ ಅಲ್ಲದೆ ಸ್ಥಳೀಯ ಮಹಿಳೆಯರು ತಯಾರಿಸಿದ ಕರಕುಶಲ ವಸ್ತುಗಳ ಮತ್ತು ಗೋವು ಉತ್ಪನ್ನಗಳ ಮಳಿಗೆಗಳು ಎಂದು ತಿಳಿಸಿದ ಸಮರ್ಪಣ ಟ್ರಸ್ಟ್ ಮುಖ್ಯಸ್ಥ ಮಲ್ಲಿಕಾರ್ಜುನ ಸಮ್ಮೇಳನದಲ್ಲಿ “ಭಾರತೀಯ ಚಿಂತನೆಯಲ್ಲಿ ಮಹಿಳೆ”, “ಭಾರತದ ವಿಕಾಸದಲ್ಲಿ ಮಹಿಳೆಯ ಪಾತ್ರ” ಮತ್ತು ಮಹಿಳಾ ಸ್ವಾವಲಂಬನೆ, ಆರೋಗ್ಯ, ಶಿಕ್ಷಣ ವಿಷಯಗಳ ಬಗ್ಗೆ ಮಾರ್ಗದರ್ಶನ ನೀಡಲು ವಿಷಯ ತಜ್ಞರು ಆಗಮಿಸಲಿದ್ದಾರೆ ಎಂದರು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g