ವೀರಶೈವ ಮಹಾಸಭಾದ ಮಾರ್ಚ್ ನೂತನ ಜಿಲ್ಲಾ ಪದಾಧಿಕಾರಿಗಳಿಗೆ 27 ರಂದು ಜಗದ್ಗುರುಗಳಿಂದ ಪ್ರಮಾಣ ಪತ್ರ
1 min readಚಿಕ್ಕಮಗಳೂರು : ಅಖಿಲ ಭಾರತ ವೀರಶೈವ ಮಹಾ ಸಭಾದ ಜಿಲ್ಲಾ ಘಟಕಕ್ಕೆ ನೂತನ ಪದಾಧಿಕಾರಿಗಳು ಆಯ್ಕೆಯಾಗಿದ್ದಾರೆ. ಇವರುಗಳಿಗೆ ಮಾರ್ಚ್ 27 ರಂದು ರಂಭಾಪುರಿ ಮಠದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಆಯ್ಕೆಯ ಪ್ರಮಾಣ ಪತ್ರವನ್ನು ಜಗದ್ಗುರುಗಳು ನೀಡಲಿದ್ದಾರೆ ಎಂದು ಅಖಿಲ ಭಾರತ ವೀರಶೈವ ಮಹಾಸಭಾದ ನೂತನ ಜಿಲ್ಲಾ ಕಮಿಟಿಯ ಸದಸ್ಯರಾದ ಚಂದ್ರಮೌಳಿ ಹೇಳಿದ್ರು.
ಸುದ್ದಿಗೋಷ್ಠಿಯ ನಂತರ ಮಾತನಾಡಿದ ಅವರು ಮಾರ್ಚ್ 27 ರಂದು ಜಗದ್ಗುರು ರೇಣುಕಾಚಾರ್ಯರವರ ಯುಗಮಾನೋತ್ಸವ ಹಾಗೂ ವೀರಭದ್ರಸ್ವಾಮಿಯವರ ರಥೋತ್ಸವದ ಸಭಾ ಕಾರ್ಯಕ್ರಮ ನಡೆಯಲಿದೆ. ಜಗದ್ಗುರುಗಳ ಸಾನಿಧ್ಯದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾದ ಜಿಲ್ಲಾ ಘಟಕಕ್ಕೆ ನೂತನವಾಗಿ ಆಯ್ಕೆಯಾಗಿರುವ ಎಲ್ಲಾ ಸದಸ್ಯರಿಗೂ ಆಯ್ಕೆಯ ಪತ್ರವನ್ನು ನೀಡಲಿದ್ದಾರೆ. ಆಯ್ಕೆಯಾಗಿರುವ ಎಲ್ಲರೂ ಉತ್ಸಾಹಿಗಳಾಗಿದ್ದು ಎಲ್ಲರ ಸಹಕಾರದಲ್ಲಿ ಉತ್ತಮ ಕೆಲಸ ಮಾಡುತ್ತೇವೆ ಎಂದು ಹೇಳಿದ್ರು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g