May 14, 2024

MALNAD TV

HEART OF COFFEE CITY

ಗೌರಿಗದ್ದೆ ಆಶ್ರಮ, ರಂಭಾಪುರೀ ಪೀಠ ಶ್ರೀಗಳ ಆಶೀರ್ವಾದ ಪಡೆದ ನೂತನ ಗೃಹ ಸಚಿವ ಅರಗ ಜ್ಞಾನೇಂದ್ರ

1 min read

ಚಿಕ್ಕಮಗಳೂರು: ಶೃಂಗೇರಿ ತಾಲೂಕಿನ ಮಳೆ ಹಾನಿ ಪ್ರದೇಶಗಳ ವೀಕ್ಷಣೆ ಬಳಿಕ ನೂತನ ಗೃಹ ಸಚಿವ ಅರಗ ಜ್ಞಾನೇಂದ್ರ ಕೊಪ್ಪ ತಾಲೂಕಿನ ಗೌರಿಗದ್ದೆ ಆಶ್ರಮದಲ್ಲಿ ವಿನಯ್ ಗುರೂಜಿ ಭೇಟಿ ಮಾಡಿ ಆಶೀರ್ವಾದ ಪಡೆದರು.
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ನೇತೃತ್ವದ ಸಂಪುಟ ರಚನೆಯಲ್ಲಿ ಆಯ್ಕೆಯಾದ ನೂತನ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಶೃಂಗೇರಿ ಹಾಗೂ ಎನ್. ಆರ್. ಪುರ ತಾಲೂಕಿನ ಮಳೆ ಹಾನಿಗೆ ಒಳಹಾಗಿದ್ದ ಮನೆ ಹಾಗೂ ಸೇತುವೆ ಸೇರಿದಂತೆ ಹಾನಿ ಪ್ರದೇಶ ವೀಕ್ಷಣೆ ಬಳಿಕ ಸಚಿವ ಅರಗ ಜ್ಞಾನೇಂದ್ರ ಅವರು ಕೊಪ್ಪ ತಾಲೂಕಿನ ಗೌರಿಗದ್ದೆ ಆಶ್ರಮದಲ್ಲಿ ವಿನಯ್ ಗುರೂಜಿ ಅವರನ್ನ ಭೇಟಿ ಮಾಡಿ ಆಶೀರ್ವಾದ ಪಡೆದು.

 

ಆಶ್ರಮದಲ್ಲಿ ದೇವಿಗೆ ವಿನಯ್ ಗುರೂಜಿ ಆರತಿ ಮಾಡಿದ ಕೆಲವೇ ಕ್ಷಣದಲ್ಲಿ ದೇವಿಯ ತಲೆ ಮೇಲಿಂದ ಹೂವಿನ ಪ್ರಸಾದವಾಗಿದೆ. ಹೂವಿನ ಪ್ರಸಾದವನ್ನ ಗೃಹ ಸಚಿವರ ಕೊರಳಿ ಹಾಕಿ ನೂತನ ಗೃಹ ಸಚಿವರಿಗೆ ವಿನಯ್ ಗುರೂಜಿ ಆಶೀರ್ವಾದ ಮಾಡಿದರು. ಬಳಿಕ ಕೆಲ ಹೊತ್ತು ವಿನಯ ಗುರೂಜಿ ಜೊತೆ ಗೃಹ ಸಚಿವ ಅರಗ ಜ್ಞಾನೇಂದ್ರ ಮಾತುಕತೆ ನಡೆಸಿದರು. ಈ ವೇಳೆ ಮಾಜಿ ಸಚಿವ ಜೀವರಾಜ್ ಸಾಥ್ ನೀಡಿದರು.
ಬಳಿಕ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಬಾಳೆಹೊನ್ನೂರಿನ ರಂಭಾಪುರೀ ಪೀಠಕ್ಕೆ ಭೇಟಿ ನೀಡಿ ರಂಭಾಪುರೀ ಪೀಠದಲ್ಲಿ ಡಾ.ವೀರಸೋಮೇಶ್ವರ ಜಗದ್ಗುರುಗಳ ಆಶೀರ್ವಾದ ಪಡೆದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!