April 28, 2024

MALNAD TV

HEART OF COFFEE CITY

ಹಿರೇಮಗಳೂರು ಕಣ್ಣನ್’ಗೆ ಜಿಲ್ಲಾಡಳಿತದಿಂದ ನೋಟಿಸ್

1 min read

ಚಿಕ್ಕಮಗಳೂರು: ಕಳೆದ 50 ವರ್ಷಗಳಿಂದ ಚಿಕ್ಕಮಗಳೂರು ಹೊರ ವಲಯದಲ್ಲಿರುವ ಕಲ್ಯಾಣ ಕೋದಂಡ ರಾಮ ದೇವಾಲಯದ ಪ್ರಧಾನ ಅರ್ಚಕರಾಗಿ ಸೇವೆ ಸಲ್ಲಿಸುತ್ತಿರುವ ಹಿರೇಮಗಳೂರು ಕಣ್ಣನ್ ಅವರಿಗೆ ಜಿಲ್ಲಾಡಳಿತ ನೋಟಿಸ್ ನೀಡಿದೆ.

ಕನ್ನಡದ ಪಂಡಿತ, ಕನ್ನಡದ ಪೂಜಾರಿ ಎಂದೇ ಖ್ಯಾತಿ ಪಡೆದಿರುವ ಹಿರೇಮಗಳೂರು ಕಣ್ಣನ್ ಅವರ ವೇತನವನ್ನು ತಡೆ ಹಿಡಿದು, 4500 ರೂಪಾಯಿಯಂತೆ 10 ವರ್ಷಕ್ಕೆ 4,74,000 ರೂ. ಹಣವನ್ನು ಸರ್ಕಾರಕ್ಕೆ ವಾಪಸ್ ನೀಡುವಂತೆ ಚಿಕ್ಕಮಗಳೂರು ಜಿಲ್ಲಾಡಳಿತ ನೋಟಿಸ್ ಜಾರಿ ಮಾಡಿದೆ.

ರಾಜ್ಯ ಸರ್ಕಾರ ಪ್ರತಿ ತಿಂಗಳು 7500 ರೂ. ವೇತನ ನೀಡುತ್ತಿತ್ತು. ಆದರೆ ಇದೀಗ ದೇವಾಲಯದ ಆದಾಯ ಕಡಿಮೆ ಇದೆ ಎಂಬ ಕಾರಣ ನೀಡಿ ಈ ಹಿಂದೆ ನೀಡಿದ್ದ 7500 ರೂ. ವೇತನದಲ್ಲಿ 4500 ರೂ. ಅನ್ನು ವಾಪಸ್ ನೀಡುವಂತೆ, ಈ ತಿಂಗಳ ವೇತನವನ್ನು ತಡೆ ಹಿಡಿದು ತಹಶಿಲ್ದಾರ್ ಸುಮಂತ್ ನೋಟಿಸ್ ಜಾರಿ ಮಾಡಿದ್ದಾರೆ.

ಹಿರೇಮಗಳೂರು ಕಣ್ಣನ್ ಅವರು ಈ ದೇಗುಲದಲ್ಲಿ ದಿನ ನಿತ್ಯವೂ ಸೀತಾ ರಾಮ ಲಕ್ಷ್ಮಣರಿಗೆ ಕನ್ನಡದಲ್ಲೇ ಮಂತ್ರಘೋಷಗಳಿಂದ ಪೂಜೆ ಸಲ್ಲಿಸುವುದು ವಿಶೇಷವಾಗಿದ್ದು, ರಾಜ್ಯ ಹೊರ ರಾಜ್ಯದಿಂದ ಆಗಮಿಸುವ ನೂರಾರು ಭಕ್ತರು ಕಲ್ಯಾಣ ರಾಮರ ದರ್ಶನ ಪಡೆಯುತ್ತಿದ್ದಾರೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!