ನ. 30 ರಂದು 536ನೇ ವರ್ಷದ “ಕನಕ ಜಯಂತಿ” ಆಚರಣೆ
1 min readಚಿಕ್ಕಮಗಳೂರು: 536ನೇ ವರ್ಷದ ಕನಕ ಜಯಂತಿಯನ್ನು ಇದೇ ನವಂಬರ್ 30 ರಂದು ನಗರದ ಕುವೆಂಪು ಕಲಾ ಮಂದಿರದಲ್ಲಿ ಆಯೋಜಿಸಲಾಗಿದೆ ಎಂದು ಕನಕ ಜಯಂತಿ ಆಚರಣೆ ಸಮಿತಿ ಅಧ್ಯಕ್ಷ ಕೆ.ಸಿ.ಕೆಂಗೇಗೌಡ ತಿಳಿಸಿದರು.
ನಗರದ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ಜಿಲ್ಲಾಡಳಿತ, ಜಿಲ್ಲಾ ಕುರುಬರ ಸಂಘ, ತಾಲ್ಲೂಕು ಕುರುಬರ ಸಂಘ, ಕನಕಶ್ರೀ ಮಹಿಳಾ ಸಂಘ, ಜಿಲ್ಲಾ ಕನಕ ನೌಕರರ ಸಂಘ ಹಾಗೂ ಸಂಗೊಳ್ಳಿ ರಾಯಣ್ಣ ಯುವಸೇನೆ ಇವರುಗಳ ಸಹಯೋಗದಲ್ಲಿ ನವೆಂಬರ್ 30 ರಂದು ಬೆಳಿಗ್ಗೆ 11 ಗಂಟೆಗೆ 536 ನೇ ಕನಕ ಜಯಂತಿಯನ್ನು ನಗರದ ಕುವೆಂಪು ಕಲಾ ಮಂದಿರದಲ್ಲಿ ಆಚರಿಸಲಾಗುತ್ತದೆ ಎಂದರು.
ನಗರದ ತಾಲ್ಲೂಕು ಕಛೇರಿಯಿಂದ, ಎಂ.ಜಿ ರಸ್ತೆ ಮಾರ್ಗವಾಗಿ ಕನಕದಾಸರ ಭಾವಚಿತ್ರವನ್ನು ಕಲಾ ತಂಡಗಳ ಮೂಲಕ ಮೆರವಣಿಗೆ ನಡೆಸಿ ನಂತರ ಕುವೆಂಪು ಕಲಾ ಮಂದಿರದಲ್ಲಿ ವೇದಿಕೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಕುರುಬ ಸಮಾಜದ ಮುಖಂಡ ಮಂಜೇಗೌಡ ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರು ಹಾಗೂ ಸಂಸ್ಕೃತಿ ಚಿಂತಕರಾದ ಡಾ.ನಟರಾಜ್ ಬೂದಾಳ್ ಅವರು ಉಪನ್ಯಾಸ ನೀಡಲಿದ್ದು, ಜಿಲ್ಲೆಯ ಜನಪ್ರತಿನಿಧಿಗಳು, ಎಲ್ಲಾ ಸಮಾಜದ ಹಿರಿಯ ಮುಖಂಡರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g