May 7, 2024

MALNAD TV

HEART OF COFFEE CITY

ಪ್ರತಾಪ್ ಸಿಂಹ ಸಿ.ಟಿ ರವಿ ಪರ ಒಕ್ಕಲಿಗ ಸಮುದಾಯ ಬ್ಯಾಟಿಂಗ್

1 min read

ಬಿಜೆಪಿ ಟಿಕೆಟ್ ತಪ್ಪುವ ಪ್ರತಾಪ್ ಸಿಂಹ, ಸಿ.ಟಿ ರವಿ, ಪ್ರೀತಂಗೌಡ ಪರ ಒಕ್ಕಲಿಗ ಸಮುದಾಯ ಬ್ಯಾಟಿಂಗ್ ಗೆ ಇಳಿದಿದೆ. ಜನಾಂಗಕ್ಕೆ ಅನ್ಯಾಯ ಮಾಡಲಾಗುತ್ತಿದೆ ಎಂದಿರುವ ಮುಖಂಡರು ವಿಜಯೇಂದ್ರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ರಾಜ್ಯದಲ್ಲಿ ಲೋಕಸಭಾ ಟಿಕೆಟ್ ವಿಚಾರದಲ್ಲಿ ಬಿಜೆಪಿ ಒಕ್ಕಲಿಗ ಸಮುದಾಯದ ಆಕಾಂಕ್ಷಿಗಳನ್ನು ಕಡೆಗಣಿಸಲಾಗುತ್ತಿದೆ ಎಂದು ಚಿಕ್ಕಮಗಳೂರಿನ ಒಕ್ಕಲಿಗ ಜನಾಂಗದ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಒಕ್ಕಲಿಗರಾದ ಪ್ರತಾಪ್ ಸಿಂಹ ಸಿ.ಟಿ ರವಿ ಪ್ರೀತಮ್ ಗೌಡ ಸೇರಿದಂತೆ ಹಲವರನ್ನು ಮೂಲೆಗುಂಪು ಮಾಡಲಾಗುತ್ತಿದೆ ಎಂದು ಒಕ್ಕಲಿಗರ ಸಂಘದ ಮಾಜಿ ನಿರ್ದೇಶಕ ಉತ್ತಮ್ ಗೌಡ ಸೇರಿದಂತೆ ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿ ರಾಜ್ಯಾದ್ಯಕ್ಷ ಬಿ.ವೈ ವಿಜಯೇಂದ್ರ ಇದಕ್ಕೆಲ್ಲ ಕಾರಣ ಎಂದು ಆರೋಪಿಸಿರುವ ಸಮುದಾಯ ಮುಖಂಡರು ಒಕ್ಕಲಿಗ ಜನಾಂಗದವರನ್ನು ಮುಗಿಸುವ ಸಂಚು ಇದಾಗಿದೆ ಎಂದಿದ್ದಾರೆ. ಪ್ರತಾಪ್ ಸಿಂಹ ಭ್ರಷ್ಟಾಚಾರಕ್ಕೆ ಪ್ರೋತ್ಸಾಹ ಕೊಟ್ಟಿಲ್ಲ ಎಂಬ ಕಾರಣಕ್ಕೆ ಮೈಸೂರಿನಲ್ಲಿ ಹೀರೊ ಆಗಿ ಉಳಿದಿಲ್ಲ ಎಂದಿರುವ ಒಕ್ಕಲಿಗ ಸಂಘದ ಮುಖಂಡರು ಉಡುಪಿ ಚಿಕ್ಕಮಗಳೂರು ಕ್ಷೇತ್ರದಿಂದ ಪ್ರತಾಪ್ ಸಿಂಹಗೆ ಟಿಕೆಟ್ ಕೊಡಿ ಎಂದು ಒತ್ತಾಯಿಸಿದ್ದಾರೆ. ಏಕೆ ಟಿಕೆಟ್ ತಪ್ಪಿಸಲಾಗುತ್ತಿದೆ ಉತ್ತರ ಕೊಡಿ ಎಂದು ಪ್ರಶ್ನಿಸಿರುವ ಮುಖಂಡರು ಇದೊಂದು ದುಃಖದ ವಿಚಾರ ಎನ್ನುತ್ತಿದ್ದಾರೆ. ಬಿಜೆಪಿ ಹಿಂದುತ್ವ ಉಳಿಸಲು ಕಾಫಿ ಬೆಳೆಗಾರರ ದನಿಯಾಗಿದ್ದಾರೆ ಎನ್ನುತ್ತಾ ಶೋಭಾ ಕರಂದ್ಲಾಜೆ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ಏನು ಕೊಡುಗೆ ಕೊಟ್ಟಿದ್ದಾರೆ ಎಂದು ಶ್ವೇತ ಪತ್ರ ಹೊರಡಿಸಲಿ ಎಂದು ಒತ್ತಾಯಿಸಿದ್ದಾರೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!