May 3, 2024

MALNAD TV

HEART OF COFFEE CITY

‘ಉನ್ನತ ಶಿಕ್ಷಣ ಕುರಿತು’ ವಿದ್ಯಾರ್ಥಿಗಳಿಗೆ ಒಂದು ದಿನದ ಕಾರ್ಯಾಗಾರ

1 min read

ಚಿಕ್ಕಮಗಳೂರು: ಕುವೆಂಪು ವಿಶ್ವವಿದ್ಯಾನಿಲಯದ ಐ.ಡಿ.ಎಸ್.ಜಿ. ಸರ್ಕಾರಿ ಕಾಲೇಜು ಸಮಾಜಶಾಸ್ತ್ರ ವಿಭಾಗ ಮತ್ತು ಮಂಗಳೂರು ವಿಶ್ವವಿದ್ಯಾನಿಲಯದ ಸಮಾಜಶಾಸ್ತ್ರ ಮತ್ತು ಸಮಾಜಕಾರ್ಯ ವಿಭಾಗವು ಜಂಟಿಯಾಗಿ Mahatma Gandhi National Council of Rural Education (MGNCRE) ಹೈದರಾಬಾದ್ ಸಂಸ್ಥೆಯ ಪ್ರಯೋಜಕತೆಯಲ್ಲಿ ಇಂದು ನಗರದ IDSG ಸರ್ಕಾರಿ ಕಾಲೇಜಿನ ಮಲ್ಲೇಗೌಡ ಸಭಾಂಗಣದಲ್ಲಿ ಉನ್ನತ ಶಿಕ್ಷಣ ಸಂಸ್ಥೆಗಳ ಸುಸ್ಥಿರತೆಯ ಅಭ್ಯಾಸ ಆಧಾರಿತ ಸಾಮರ್ಥ್ಯ ನಿರ್ಮಾಣದ ಕುರಿತು ವಿದ್ಯಾರ್ಥಿಗಳಿಗಾಗಿ ಒಂದು ದಿನದ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು.

ಈ ಕಾರ್ಯಾಗಾರದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ, MGNCRE-ಹೈದರಾಬಾದ್,ರಿಸರ್ಚ್ ಅಸೋಸಿಯೇಟ್, ಡಾ.ವಿನಯ್ ಬಡಿಗೇರ್ ಅವರು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಉಪನ್ಯಾಸ ನೀಡಿದರು. ಈ ಸಂದರ್ಭದಲ್ಲಿ IDSG ಸರ್ಕಾರಿ ಕಾಲೇಜು ಪ್ರಾಂಶುಪಾಲರು ಮತ್ತು ಬೋಧಕ ಮತ್ತು ಬೋಧಕೇತರ ಸಿಬ್ಬಂದಿ, IDSG ಕಾಲೇಜಿನ UG ಮತ್ತು P.G ವಿಭಾಗದ ರೋವರ್ ಮತ್ತು ರೇಂಜರ್ ವಿದ್ಯಾರ್ಥಿಗಳ ಸಂಯೋಜಕರು ಮತ್ತು ಸದಸ್ಯರು ಸೇರಿದಂತೆ ಇತರರು ಉಪಸ್ಥಿತರಿದ್ದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!