May 14, 2024

MALNAD TV

HEART OF COFFEE CITY

ಸಿಡಿಲು ಬಡಿದು ಓರ್ವ ವ್ಯಕ್ತಿ ಸಾವು, ಮತ್ತೊಬ್ಬರಿಗೆ ಗಂಭೀರ ಗಾಯ

1 min read

 

ಚಿಕ್ಕಮಗಳೂರು : ಸಿಡಿಲು ಬಡಿದು ಓರ್ವ ವ್ಯಕ್ತಿ ಸಾವನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಯಗಟಿಪುರ ಗ್ರಾಮದಲ್ಲಿ ನಡೆದಿದೆ.ಕುಟುಂಬ ಜೊತೆಗೂಡಿ ದೇವಾಲಯಕ್ಕೆ ಬಂದಿದ್ದ ವ್ಯಕ್ತಿಯೋರ್ವ ಸಿಡಿಲು ಬಡಿದು ಮೃತಪಟ್ಟಿದ್ದು, ಮತ್ತೋರ್ವ ಮಹಿಳೆಯ ಕೈಗೆ ಗಾಯವಾಗಿದೆ. ತರೀಕೆರೆ ತಾಲೂಕಿನ ಬಾವಿಕೆರೆ ನಿವಾಸಿ 33 ವರ್ಷದ ಮುಖೇಶ್ ಮೃತ ದುರ್ದೈವಿ. ಬಿರುಗಾಳಿ ಮತ್ತು ಸಿಡಿಲಿನಿಂದ ಕೂಡಿದ ಭಾರೀ ಮಳೆಯಾಗಿದ್ದು ಮಗುವೊಂದರ ಮುಡಿ ಕೊಡುವ ಶಾಸ್ತ್ರಕ್ಕಾಗಿ ಬಂಧುಗಳೆಲ್ಲಾ ಯಗಟಿಪುರ ಮಲ್ಲಿಕಾರ್ಜುನ ಸ್ವಾಮಿ ದೇವಾಲಯದಲ್ಲಿ ಇದ್ದಾಗ ಘಟನೆ ನಡೆದಿದೆ. ಪ್ರತ್ಯಕ್ಷದರ್ಶಿ ಒಬ್ಬರ ಪ್ರಕಾರ ಈ ಕುಟುಂಬದ ಸದಸ್ಯರು ದೇವಾಲಯದ ದಕ್ಷಿಣ ಭಾಗದಲ್ಲಿ ಶಾಸ್ತ್ರದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾಗ ಏಕಾಏಕಿ ಮಳೆ ಬಂದಿದ್ದು ಅದರ ಹಿಂದೆಯೇ ಮುಕೇಶ್ ಅವರಿಗೆ ಸಿಡಿಲು ಬಡಿದಿದೆ. ಪಕ್ಕದಲ್ಲೇ ಇದ್ದ ಮಂಜುಳ ಅವರ ಕೈಗೆ ಗಾಯವಾಗಿದ್ದು ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಯಗಟಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!