ಕಾಂಗ್ರೆಸ್ ಅಧಿಕಾರದಿಂದ ಕೆಳಗಿಳಿಸುವ ತಾಕತ್ತು ಇರೋದು ಈ ಕಾಂಗ್ರೆಸ್ಸಿಗರಿಗೆ ಮಾತ್ರ; ಸಿ.ಟಿ.ರವಿ
1 min readಚಿಕ್ಕಮಗಳೂರು: ರಾಜ್ಯ ಸರ್ಕಾರವನ್ನ ಬಿಳಿಸುವ ತಾಕತ್ತು ಹೊರಗಡೆಯ ಯಾರಿಗೂ ಇಲ್ಲ, ಬೀಳಿಸುವ ಸಾಮಾರ್ಥ್ಯ ಇರೋದು ಒಳಗಡೆ ಇರುವ ಕಾಂಗ್ರೆಸ್ಸಿಗರಿಗೆ ಮಾತ್ರ ಎಂದು ಮಾಜಿ ಸಚಿವ ಸಿ.ಟಿ.ರವಿ ಹೇಳಿದ್ದಾರೆ.
ರಾಜ್ಯ ಸರ್ಕಾರದ ಆಡಳಿತ ವೈಖರಿ ಬಗ್ಗೆ ಮಾದ್ಯಮವಿತ್ರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ 135 ಜನ ಕಾಂಗ್ರೆಸ್ಸಿಗರು ಇದ್ದಾರೆ, ಅವರಲ್ಲಿ ಒಗ್ಗಟ್ಟಿದ್ರೆ ಯಾರು ಬೀಳಿಸಲು ಆಗುತ್ತೆ ಎಂದರು. ಸತೀಶ್ ಜಾರಕಿಹೊಳಿಗೆ ನಾವು ಹೇಳಿಕೊಟ್ಟಿದ್ದೀವಾ..? ಡಿಕೆಶಿ ಬೆಳಗಾವಿಗೆ ಬಂದಾಗ ಹೋಗಬೇಡಿ ಅಂತ ನಾವು ಹೇಳಿಕೊಟ್ಟಿದ್ದೀವಾ…? ಅದು ಅವರು ತೆಗೆದುಕೊಂಡಿರುವ ತೀರ್ಮಾನ. ಸರ್ಕಾರಕ್ಕೆ 20 ಹಿರಿಯ ಶಾಸಕರು ಪತ್ರ ಬರೆದಿದ್ದರು, ನಾವೇನಾದ್ರು ಬರೀರಿ ಅಂತ ಬರ್ಸಿದ್ವಾ..? ಅಥವಾ ರಾಜಣ್ಣ ಅವರು ಐದು ಜನ ಡಿಸಿಎಂ ಮಾಡಿ ಅಂತ ನಾವು ಹೇಳಿ ಅವರು ಹೇಳಿಕೆ ನೀಡಿದ್ರಾ..? ಬಿಜೆಪಿಯವರು ಮಾಡಿದ್ರೆ.. ಬರ್ಸಿದ್ರೆ.. ಇವೆಲ್ಲಾ ಬಿಜೆಪಿಯವರು ಮಾಡ್ತಿದ್ದಾರೆ ಅನ್ನಬಹುದು ಅಲ್ಲವೇ ಎಂದು ಪ್ರಶ್ನೆ ಮಾಡಿದರು.
ಕಾಂಗ್ರೆಸ್ ಪಕ್ಷದಲ್ಲಿ 135 ಜನ ಒಟ್ಟಿಗೆ ಇದ್ರೆ ಯಾರು ಅಲ್ಲಾಡಿಸಲು ಅಗುವುದಿಲ್ಲ. ಅವರು ಅಲ್ಲಾಡ್ತಾ ಇದ್ರೆ ಅದು ನಮ್ಮ ಕೈಯಲ್ಲಿ ಇಲ್ಲ. ಹಾಗೇನಾದರೂ ಪಕ್ಷ ಅಲ್ಲಾಡ್ತಾ ಇದ್ರೆ ಇವತ್ತಲ್ಲ ನಾಳೆ ಬಿದ್ದೇ ಬಿಳುತ್ತೇ ಅದು ನಮ್ಮ ಕೈಯಲ್ಲಿದ್ದೀಯಾ..? ಅವರಿಗೆ ಜನ ಒಳ್ಳೆಯ ಅಡಳಿತ ಕೊಡಿ ಅಂತ ಅಧಿಕಾರ ಕೊಟ್ಟಿದ್ದಾರೆ. ಅದನ್ನು ಬಿಟ್ಟು ಕಲಾವಿದರ ಬಳಿಯೂ ದುಡ್ಡು ಎತ್ಕೊಂಡು ತಿನ್ನಿ ಅಂತ ಅಧಿಕಾರ ಕೊಟ್ಟಿದ್ದಾರಾ…? ಎಲ್ಲದರಲ್ಲೂ ಹೆದರಿಸಿ-ಬೆದರಿಸಿ ವಸೂಲಿ ಮಾಡಿ ಅಂತ ಅಧಿಕಾರ ಕೊಟ್ಟಿರೋದಾ..? ನಾವು ಹೆಚ್ಚು ಅಂದ್ರೆ ಇವರ ಮೇಲೆ ಆರೋಪ ಮಾಡಬಹುದು ಅಷ್ಟೇ. ಸರ್ಕಾರದ ಬಗ್ಗೆ ಜನ ಶಾಪ ಹಾಕಬಹುದು, ಅದಕ್ಕಿಂತ ಇನ್ನೇನೂ ಮಾಡೋಕಾಗುತ್ತೇ ಎಂದ ಅವರು ಸರ್ಕಾರವನ್ನ ಬಿಳಿಸುವ ತಾಕತ್ತು ಹೊರಗಡೆಯ ಯಾರಿಗೂ ಇಲ್ಲ, ಬದಲಾಗಿ ಬೀಳಿಸುವ ಸಾಮಾರ್ಥ್ಯ ಇರೋದು ಒಳಗಡೆ ಇರುವ ಕಾಂಗ್ರೆಸ್ಸಿಗರಿಗೆ ಮಾತ್ರ ಎಂದು ಹೇಳಿದರು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g