April 28, 2024

MALNAD TV

HEART OF COFFEE CITY

ರಾಮಮಂದಿರ ಉದ್ಘಾಟನೆ ದಿನ ಶಾಲೆಗೆ ಬರದಿದ್ದರೆ ದಂಡ : ಸೇಂಟ್ ಜೊಸೆಫ್ ಶಾಲೆ ವಿರುದ್ಧ ಸಂಘ ಪರಿವಾರ ಆಕ್ರೋಶ

1 min read

ಚಿಕ್ಕಮಗಳೂರು: ಜನವರಿ 22ಕ್ಕೆ ವಿದ್ಯಾರ್ಥಿಗಳು ರಜೆ ಹಾಕಿದ್ರೆ ಒಂದು ಸಾವಿರ ದಂಡ ವಿಧಿಸುವ ಸೇಂಟ್ ಜೋಸೆಫ್ ಶಾಲೆಗೆ ವಿಶ್ವ ಹಿಂದು ಪರಿಷತ್ ಮುತ್ತಿಗೆಗೆ ಯತ್ನಿಸಿ ಆಕ್ರೋಶ ವ್ಯಕ್ತಪಡಿಸಿದೆ.

ರಾಮ ಮಂದಿರ ಪುನರ್ ಪ್ರತಿಷ್ಠಾಪನೆ ದಿನ ಯಾರಾದ್ರು ಶಾಲೆಗೆ ರಜೆ ಹಾಕಿದ್ರೆ 1000 ದಂಡ ಎಂದು ಚಿಕ್ಕಮಗಳೂರು ನಗರದ ಸೆಂಟ್ ಜೋಸೆಫ್ ಮಕ್ಕಳಿಗೆ ತಾಕೀತು ಮಾಡಿದ್ದನ್ನು ಖಂಡಿಸಿ ಶಾಲೆ ವಿರುದ್ಧ ಭಜರಂಗದಳ ಹಾಗೂ ವಿಶ್ವಹಿಂದೂಪರಿಷತ್ ಆಕ್ರೋಶ ಹೊರಹಾಕಿದೆ. ಅಯೋಧ್ಯೆಯಲ್ಲಿ ರಾಮಮಂದಿರ ಪುನರ್ ಪ್ರತಿಷ್ಠಾಪನೆ ದಿನ ಜನವರಿ 22ರಂದು ಶಾಲೆಗಳಿಗೆ ರಜೆ ನೀಡ್ಬೇಕೋ… ಬೇಡ್ವೋ ಅಂತ ಸರ್ಕಾರ ಕೂಡ ಗೊಂದಲದಲ್ಲಿದೆ‌. ಈ ಮಧ್ಯೆ ಖಾಸಗಿ ಶಾಲೆಗಳು ಮಕ್ಕಳ ಮೇಲೆ ದಬ್ಬಾಳಿಕೆ ಮಾಡುತ್ತಿವೆ ಎಂದು ಹಿಂದುಪರ ಸಂಘಟನೆಗಳು ಶಾಲೆ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಶಾಲೆಯ ಈ ನಡೆ ಯಿಂದ ಆಕ್ರೋಶಗೊಂಡ ಸಂಘ ಪರಿವಾರ ಕಾರ್ಯಕರ್ತರು ಶಾಲೆ ಬಳಿ ತೆರಳಿ ಆಡಳಿತ ಮಂಡಳಿಗೆ ತರಾಟೆಗೆ ತೆಗೆದುಕೊಂಡರು. ಈ ವೇಳೆ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು,
ಒಂದು ಧರ್ಮದ ಮಕ್ಕಳ ಮೇಲೆ ಶಾಲೆ ಈ ರೀತಿ ದಬ್ಬಾಳಿಕೆ ಮಾಡೋದು ಎಷ್ಟು ಸರಿ ಎಂದು ಆಕ್ರೋಶ ಹೊರಹಾಕಿರೋ ಸಂಘಟನೆಗಳು ಜನವರಿ 22ರಂದು ಯಾವುದೇ ಮಕ್ಕಳಿಗೆ ರಾಮ ಮಂದಿರದ ಕಾರ್ಯಕ್ರಮ ಲೈವ್ ನೋಡಬೇಕು ಅನ್ನಿಸಿದರೆ ರಜೆ ಹಾಕಿ ಮನೆಯಲ್ಲೇ ನೋಡಿ. ಜಿಲ್ಲೆಯ ಯಾವುದೇ ಶಾಲೆಯ ಯಾವುದೇ ಮಕ್ಕಳಿಗೆ ಯಾರಾದರೂ ದಂಡ ಹಾಕಿದರೆ ಪರಿಣಾಮ ನೆಟ್ಟಗಿರಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ. ಈ ನಡುವೆ ಹಿಂದುಪರ ಸಂಘಟನೆ ಕಾರ್ಯಕರ್ತರು ಶಾಲೆಗೆ ಮುತ್ತಿಗೆ ಹಾಕಲು ಯತ್ನಿಸಿದರು ಆದರೆ ಶಾಲೆಯಲ್ಲಿ ಇಂದು ನವೋದಯ ಪರೀಕ್ಷೆ ನಡೆಯುತ್ತಿದ್ದು ಶಾಲೆಗೆ ರಜೆ ಇದ್ದ ಕಾರಣ ಶಾಲಾ ಆಡಳಿತ ಮಂಡಳಿ ಜೊತೆ ಚರ್ಚಿಸಿ ಎಚ್ಚರಿಕೆ ನೀಡಿದರು, ಸ್ಥಳಕ್ಕೆ ಎ.ಎಸ್ಪಿ. ಕೃಷ್ಣಮೂರ್ತಿ ಭೇಟಿ ನೀಡಿ ಹಿಂದುಪರ ಸಂಘಟನೆ ಕಾರ್ಯಕರ್ತರ ಜೊತೆ ಮಾತನಾಡಿ ಸಮಾಧಾನಪಡಿಸಿದರು. ಶಾಲಾ ಆಡಳಿತ ಮಂಡಳಿ ನಾವು ಯಾವುದೇ ದಂಡ ವಿಧಿಸುವ ಬಗ್ಗೆ ವಿದ್ಯಾರ್ಥಿಗಳಿಗೆ ಮೌಖಿಕವಾಗಿ ಏನೂ ತಿಳಿಸಿಲ್ಲ ಎಂದು ಸ್ಪಷ್ಟನೆ ನೀಡಿದೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!