ಪಿ.ಎಫ್.ಐ ಕಾರ್ಯಕರ್ತರನ್ನು ಪೊಲೀಸರು ಅಪಹರಣ ಮಾಡಿದ್ದಾರೆ ಎಂದು ಆರೋಪಿಸಿ ಪ್ರತಿಭಟನೆ
1 min read
ಚಿಕ್ಕಮಗಳೂರು : ಉತ್ತರ ಪ್ರದೇಶದಲ್ಲಿ ಪೊಲೀಸರು ಎರಡು ಜನ ಪಾಪ್ಯೂಲರ್ ಫ್ರಂಟ್ ಕಾರ್ಯಕರ್ತರನ್ನು ಅಪಹರಣ ಮಾಡಿದ್ದಾರೆ ಆರೋಪಿಸಿ ಪಾಪ್ಯೂಲರ್ ಪ್ರಂಟ್ ಕಾರ್ಯಕರ್ತರು ಆಜಾದ್ ಪಾರ್ಕ್ ವೃತ್ತದ ಬಳಿ ಇಂದು ಪ್ರತಿಭಟನೆ ನಡೆಸಿದರು.
ಉತ್ತರ ಪ್ರದೇಶದ ಪೊಲೀಸರು ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಪಾಪ್ಯೂಲರ್ ಫ್ರಂಟ್ ಕಾರ್ಯಕರ್ತರಾದ ಅಂಶುದ್ದ್ ಹಾಗೂ ಫೈರೋಜ್ ರವನ್ನು ಅಪಹರಣ ಮಾಡಿದ್ದಾರೆ. 5 ದಿನಗಳ ತರುವಾಯ ಪತ್ರಿಕಾ ಗೋಷ್ಠಿ ನಡೆಸಿ ಇಬ್ಬರನ್ನು ಬಂಧಿಸಿದ್ದೇವೆ ಎಂದು ತಿಳಿಸುತ್ತಾರೆ. ಅಲ್ಲದೆ ಇವರುಗಳ ಮೇಲೆ ಸುಳ್ಳು ಪ್ರಕರಣವನ್ನು ದಾಖಲಿಸಿ ಬಂಧಿಸಿದ್ದಾರೆ ಎಂದು ಆರೋಪಿಸಿದರಲ್ಲದೆ, ಕೂಡಲೇ ಇವರುಗಳನ್ನು ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದರು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g