April 29, 2024

MALNAD TV

HEART OF COFFEE CITY

ಕರ್ತವ್ಯ ಲೋಪ ಎಸಗಿದ ಪೊಲೀಸರ ಅಮಾನತು

1 min read

ಚಿಕ್ಕಮಗಳೂರು : ಪೊಲೀಸ್ ಠಾಣೆಯಿಂದ ಪರಾರಿಯಾಗಿದ್ದ ಅತ್ಯಾಚಾರದ ಆರೋಪಿ ನಿಜಾಮ್ ಕೊಪ್ಪ ಪಟ್ಟಣದಲ್ಲಿ ಸೆರೆ ಸಿಕ್ಕಿದ್ದು, ಕರ್ತವ್ಯ ಲೋಪ ಮಾಡಿದ ನಾಲ್ಕು ಮಂದಿ ಪೊಲೀಸರನ್ನು ಅಮಾನತು ಮಾಡಲಾಗಿದೆ.

 

12 ವರ್ಷದ ಹುಡುಗಿಯ ಮೇಲೆ ಅತ್ಯಾಚಾರಕ್ಕೆ ಪ್ರಯತ್ನದ ಆರೋಪದಡಿ ಬಂಧಿಸಲ್ಪಟ್ಟಿದ್ದ ಆರೋಪಿ ನಿಜಾಮ್  ಬಾಳೆಹೊನ್ನೂರು ಪೊಲೀಸ್ ಠಾಣೆಯಿಂದ ಲಾಕಪ್ ಚಿಲಕ ತೆಗೆದು ಪರಾರಿಯಾಗಿದ್ದನು. ಪೊಲೀಸ್ ಠಾಣೆಯಿಂದ ಪರಾರಿಯಾಗಿದ್ದ ಅತ್ಯಾಚಾರದ ಆರೋಪಿ ನಿಜಾಮ್ ಕೊಪ್ಪ ಪಟ್ಟಣದಲ್ಲಿ ಸೆರೆ ಸಿಕ್ಕಿದ್ದು, ಲಾಕಪ್ ಚಿಲಕ ತೆಗೆದು ಪೊಕ್ಸೊ ಆರೋಪಿ ನಿಜಾಮ್ ಪರಾರಿಯಾಗಲು  ಕರ್ತವ್ಯದಲ್ಲಿದ್ದ, ಬಾಳೆಹೊನ್ನೂರು ಪೊಲೀಸ್ ಠಾಣೆಯ ಕರ್ತವ್ಯ ಲೋಪ ಕಾರಣವಾಗಿದೆ. ಕರ್ತವ್ಯ ಲೋಪ ಎಸಗಿದ ಬಾಳೆಹೊನ್ನೂರು ಪೊಲೀಸ್ ಠಾಣೆಯ ಎ.ಎಸ್.ಐ ಸೇರಿದಂತೆ ನಾಲ್ಕು ಮಂದಿ ಪೊಲೀಸರನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎಚ್ ಅಕ್ಷಯ್  ಅಮಾನತು ಮಾಡಿದ್ದಾರೆ.

 

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!