May 21, 2024

MALNAD TV

HEART OF COFFEE CITY

ಪೊಲೀಸ್ ಯೂನಿಯನ್’ನ ಅಣ್ಣಯ್ಯ ಸುದ್ದಿಗೋಷ್ಠಿಗೆ ಪೊಲೀಸರಿಂದಲೇ ತಡೆ

1 min read

ಚಿಕ್ಕಮಗಳೂರು: ಕಾಫಿನಾಡಲ್ಲಿ ವಕೀಲರು ಹಾಗೂ ಪೊಲೀಸರ ಗಲಾಟೆ ಪ್ರಕರಣ ಕುರಿತು ಸುದ್ದಿಗೋಷ್ಠಿ ನಡೆಸಲು ಆಗಮಿಸಿದ್ದ ಮಾಜಿ ಪೊಲೀಸ್‌ ಸಿಬ್ಬಂದಿ ಅಣ್ಣಯ್ಯರನ್ನ ಪ್ರೆಸ್ ಮಿಟ್ ನಡೆಸದಂತೆ ತಡೆಯಲಾಗಿದೆ.

ಚಿಕ್ಕಮಗಳೂರಿನಲ್ಲಿ ವಕೀಲರು ಹಾಗೂ ಪೊಲೀಸರ ನಡುವಿನ ಸಂಘರ್ಷ ದಿನೆ ದಿನೇ ತಾರಕಕ್ಕೇರುತ್ತಿದೆ. ಇಂದು ಕೊಡಗಿನ ಅಣ್ಣಯ್ಯ ಎಂಬ ನಿವೃತ್ತ ಪೊಲೀಸ್ ಸಿಬ್ಬಂದಿ ಹಾಗೂ ಪೊಲೀಸ್ ಸಂಘದ ಉಪಾಧ್ಯಕ್ಷರನ್ನು ಪತ್ರಿಕಾಗೋಷ್ಠಿ ನಡೆಸದಂತೆ ಅಧಿಕಾರಿಗಳು ತಡೆಯೊಡ್ಡಿದ್ದಾರೆ, ಇದಕ್ಕೆ ಅಣ್ಣಯ್ಯ ತೀವ್ರ ಆಕ್ರೋಶ ವ್ಯಕ್ತಪಡಿಸಿದರು, ಸುದ್ದಿಗೋಷ್ಟಿ ಮಾಡದಂತೆ ನನ್ನನ್ನ ತಡೆದಿದ್ದಾರೆ ಈ ಮೂಲಕ ಹೋರಾಟವನ್ನ ಹತ್ತಿಕ್ಕಲು ಅಧಿಕಾರಿಗಳು ಯತ್ನಿಸುತ್ತಿದ್ದಾರೆ, ನಮ್ಮ ಪೊಲೀಸರಿಗೆ ಯಾಯ ತೊಂದರೆಯಾದರೆ ಇಡೀ ರಾಜ್ಯಾದ್ಯಂತ ಹೋರಾಟ ನಡೆಯಲಿದೆ ಎಂದು ಅಣ್ಣಯ್ಯ ಎಚ್ಚರಿಸಿದ್ದಾರೆ, ಎಫ್.ಐ.‌ಆರ್. ಹರಿದು ಬಿಸಾಡಿದವರ ಮೇಲೆ ಏನು ಕ್ರಮ ಕೈಗೊಂಡಿದ್ದೀರಾ ಎಂದು ಅವರು ಎಸ್ಪಿಯವರನ್ನು ಪ್ರಶ್ನಿಸಿದರು. ಪೊಲೀಸರು ಸ್ವಾಭಿಮಾನ ಉಳ್ಳವರು ಅವರಿಗೆ ಅನ್ಯಾಯ ಆಗಲು ಬಿಡಲ್ಲ ಪೊಲೀಸರಿಗೆ ಅನ್ಯಾಯವಾದರೆ ಪೊಲೀಸ್ ಕುಟುಂಬಗಳ ಜೊತೆ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಾಗುವುದು ಎಂದು ರಾಜ್ಯ ಸರ್ಕಾರಕ್ಕೆ ನೇರೆ ಎಚ್ಚರಿಕೆ ಕೊಟ್ಟರು, ಆದರೆ ಈ ನಡುವೆ ತಮ್ಮ ಪರ ಪತ್ರಿಕಾಗೋಷ್ಠಿ ನಡೆಸಲು ಆಗಮಿಸಿದ ಅಣ್ಣಯ್ಯರನ್ನು ಪೊಲೀಸರೇ ಅಡ್ಡಿಪಡಿಸಿದ್ದು ಮಾತ್ರ ವಿಪರ್ಯಾಸವಾಗಿತ್ತು. 

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!