April 30, 2024

MALNAD TV

HEART OF COFFEE CITY

ವರ್ಗಾವಣೆಗೆ ಹಣ ಪಡೆದಿದ್ದರೆ ರಾಜಕೀಯ ನಿವೃತ್ತಿ_ ಟಿ.ಡಿ ರಾಜೇಗೌಡ

1 min read

 

ಚಿಕ್ಕಮಗಳೂರು: ನನ್ನ ಕ್ಷೇತ್ರದಲ್ಲಿ ಅಧಿಕಾರಿಗಳ ವರ್ಗಾವಣೆಗೆ ಸಂಬಂಧಿಸಿದಂತೆ ಯಾವುದೇ ಅಧಿಕಾರಿಯಿಂದ ಕಪ್ಪ ಪಡೆದಿರುವುದನ್ನು ಯಾರಾದರೂ ಸಾಬೀತುಪಡಿಸಿದರೆ ರಾಜಕೀಯದಿಂದ ನಿವೃತ್ತಿ ಹೊಂದುವುದಾಗಿ ಶಾಸಕ ಟಿ.ಡಿ.ರಾಜೇಗೌಡ ಸ್ಪಷ್ಟಪಡಿಸಿದರು.

ಚಿಕ್ಕಮಗಳೂರು ನಗರದಲ್ಲಿ ಈ ಕುರಿತು ಮಾಧ್ಯಮದವರ ಜೊತೆಗೆ ಮಾತನಾಡಿ, ಕ್ಷೇತ್ರದಲ್ಲಿ 250 ರಿಂದ 300 ಹುದ್ದೆಗಳು ಖಾಲಿ ಇವೆ. ಹುದ್ದೆಗಳನ್ನು ಭರ್ತಿಮಾಡುವಂತೆ ವಿಧಾನಸಭೆ ಅಧಿವೇಶನದಲ್ಲಿ ಸರ್ಕಾರದ ಗಮನ ಸೆಳೆಯಲಾಗುವುದು. ಯಾವುದೇ ಅಧಿಕಾರಿಯಿಂದ ಒಂದೇ ಒಂದು ರೂಪಾಯಿ ಪಡೆದುಕೊಂಡಿಲ್ಲವೆಂದು ಹೇಳಿದರು.

ತಾಲೂಕು ಕಚೇರಿಯಲ್ಲಿ ಕಾನೂನು ಬಾಹಿರವಾಗಿ ಹಕ್ಕುಪತ್ರ ನೀಡಲಾಗುತ್ತಿದೆ ಎಂಬ ಮಾಹಿತಿ ಇದ್ದು, ಈ ಕುರಿತು ತಹಸೀಲ್ದಾರ್‍ಗೆ ಕೆಲವು ಸೂಚನೆ ನೀಡಲಾಗಿತ್ತು. ಬಡವರ ಪರವಾಗಿ ಕೆಲಸ ನಿರ್ವಹಿಸುವಂತೆ ತಿಳಿಸಲಾಗಿತ್ತು. ಯಾವುದೇ ಅಧಿಕಾರಿ ಮತ್ತು ನೌಕರರು ಕಾನೂನು ಬಾಹಿರವಾಗಿ ಕೆಲಸ ನಿರ್ವಹಿಸಿದರೆ ಕ್ರಮ ಆಗೆ ಆಗುತ್ತದೆ ಎಂದು ಎಚ್ಚರಿಸಿದರು.

ಹಣ ಪಡೆದುಕೊಂಡು ಹಕ್ಕುಪತ್ರ ನೀಡಲಾಗುತ್ತಿದೆ ಎಂಬ ಮಾಹಿತಿ ಸಾರ್ವಜನಿಕ ವಲಯದಲ್ಲಿ ಕೇಳಿಬಂದಿತ್ತು. ಈ ಕುರಿತು ಕಾನೂನು ಬದ್ದವಾಗಿ ಕಾರ್ಯನಿರ್ವಹಿಸುವಂತೆ ತಹಸೀಲ್ದಾರ್‍ಗೆ ತಿಳಿಸಲಾಗಿತ್ತೆಂದು ಉತ್ತರಿಸಿದರು.
ತನಿಖೆಗೆ ಮನವಿ:
ತಮ್ಮ ಲೆಟರ್‍ಹೆಡ್ ಬಳಸಿಕೊಂಡು ನಕಲಿ ಸಹಿಮಾಡಿರುವ ವಿಷಯಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಆರಗಜ್ಞಾನೇಂದ್ರ ಮತ್ತು ಕೊಪ್ಪ ಡಿವೈಎಸ್ಪಿ ಅವರಿಗೆ ತಿಳಿಸಲಾಗಿದೆ ಎಂದು ಶೃಂಗೇರಿ ಕ್ಷೇತ್ರದ ಶಾಸಕ ರಾಜೇಗೌಡ ಹೇಳಿದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!