May 17, 2024

MALNAD TV

HEART OF COFFEE CITY

ಜನಸ್ನೇಹಿ ಆಡಳಿತಕ್ಕೆ ಆದ್ಯತೆ : ಹೆಚ್.ಡಿ. ತಮ್ಮಯ್ಯ

1 min read

ಚಿಕ್ಕಮಗಳೂರು : ತಾವು ಯಾವುದೇ ಒಂದು ಜಾತಿ, ಧರ್ಮಕ್ಕೆ ಸೀಮಿತರಾಗದೆ ಕ್ಷೇತ್ರದ ಅಭಿವೃದ್ಧಿಗೆ ಪಕ್ಷಾತೀತವಾಗಿ, ಜಾತ್ಯತೀತವಾಗಿ ಕಾರ್ಯ ನಿರ್ವಹಿಸುವುದಾಗಿ ಶಾಸಕ ಹೆಚ್.ಡಿ.ತಮ್ಮಯ್ಯ ಹೇಳಿದರು.
ಎಸ್.ಎಸ್.ವಿ. ಸಮಾಜದ ವತಿಯಿಂದ ಇತ್ತೀಚೆಗೆ ನಗರದಲ್ಲಿ ಏರ್ಪಡಿಸಲಾಗಿದ್ದ ಸಮಾರಂಭದಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅವರು, ವಿಧಾನಸೌಧದಲ್ಲಿ ಬುದ್ಧ, ಬಸವ, ಅಂಬೇಡ್ಕರ್‌ರವರ ಹೆಸರಿನಲ್ಲಿ ತಾವು ಶಾಸಕನಾಗಿ ಪ್ರಮಾಣವಚನ ಸ್ವೀಕರಿಸಿದ್ದು, ಅದಕ್ಕೆ ಬದ್ಧರಾಗಿ ನಡೆದುಕೊಳ್ಳುವುದಾಗಿ ತಿಳಿಸಿದರು. ಸಾರ್ವಜನಿಕರು ಯಾವುದೇ ಸರ್ಕಾರಿ ಕಚೇರಿಗಳಿಗೆ ತೆರಳಿದಾಗ ತೊಂದರೆಯಾಗದAತೆ ಜನಸ್ನೇಹಿಯಾಗಿ ಕಾರ್ಯ ನಿರ್ವಹಿಸುವಂತೆ ಮಾಡಲು ಆದ್ಯತೆ ನೀಡುವುದಾಗಿ ಹೇಳಿದ ಅವರು, ತಾನೋರ್ವ ಸಾಮಾನ್ಯ ಜನಸೇವಕನಾಗಿ ಕಾರ್ಯ ನಿರ್ವಹಿಸಲು ಬಯಸುತ್ತೇನೆಯೇ ಹೊರತು ನಾಯಕನಾಗಿ ಅಲ್ಲ ಎಂದರು.
ಅಧ್ಯಕ್ಷತೆ ವಹಿಸಿದ್ದ ಎಸ್.ಎಸ್.ವಿ. ಸಮಾಜದ ಅಧ್ಯಕ್ಷ ಎಂ.ಎಸ್.ನಿರAಜನ್ ಮಾತನಾಡಿ, ಶಾಸಕರು ನಾನು ಎನ್ನುವ ಮನೋಭಾವವಿಲ್ಲದೆ, ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುವಂತೆ ಸಲಹೆ ನೀಡಿದರು.
ಮುಖಂಡರಾದ ಬಿ.ಹೆಚ್.ಹರೀಶ್, ವೀರಭದ್ರಪ್ಪ ವೇದಿಕೆಯಲ್ಲಿದ್ದರು. ಸಿಂದಿಗೆರೆಯ ಡಾ.ವಿನಾಯಕ ಪ್ರಾಸ್ತಾವಿಕ ಮಾತನಾಡಿದರು. ಶಿಕ್ಷಕಿ ಶಕುಂತಲ ಪ್ರಾರ್ಥನೆ, ಮುಖಂಡ ಲಲಿತ್ ಕುಮಾರ್ ಸ್ವಾಗತ, ಪ್ರಾಚಾರ್ಯ ಹೆಚ್.ಎಸ್.ಮಂಜುನಾಥ್ ಕಾರ್ಯಕ್ರಮ ನಿರೂಪಣೆ, ಮುಖಂಡ ನಾಗರಾಜ್ ವಂದನಾರ್ಪಣೆ ನೆರವೇರಿಸಿದರು. ಎಸ್.ಎಸ್.ವಿ. ಸಮಾಜದ ಮುಖಂಡರು, ವಿವಿಧ ಸಂಘ-ಸAಸ್ಥೆಗಳ ಮುಖಂಡರು ಕಾರ್ಯಕ್ರಮದಲ್ಲಿದ್ದರು.

 

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!