May 3, 2024

MALNAD TV

HEART OF COFFEE CITY

ದತ್ತಪೀಠದಲ್ಲಿ ಖಾಸಗಿ ಬಸ್ ಪಲ್ಟಿ, ಆರು ಜನರಿಗೆ ಗಾಯ

1 min read

 

 

ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾಗಿರೋ ಘಟನೆ ಚಿಕ್ಕಮಗಳೂರು ತಾಲೂಕಿನ ದತ್ತಪೀಠದ ಬಳಿ ನಡೆದಿದೆ. ದಿನನಿತ್ಯ ಚಿಕ್ಕಮಗಳೂರಿನಿಂದ ದತ್ತಪೀಠದ ಮಾರ್ಗವಾಗಿ ಓಡಾಡುವ ಖಾಸಗಿ ಬಸ್ ಎಸ್.ಎಂ.ಎಸ್. ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಂದಕಕ್ಕೆ ಉರುಳಿಬಿದ್ದಿದೆ. ಬಸ್ಸಿನಲ್ಲಿ ಏಳು ಜನ ಪ್ರಯಾಣ ಮಾಡುತ್ತಿದ್ದು ಅದೃಷ್ಟವಶಾತ್ ದೊಡ್ಡಮಟ್ಟದ ಸಾವುನೋವು ಸಂಭವಿಸಿಲ್ಲ. ದತ್ತಪೀಠ ನಾಲ್ಕೈದು ಕಿ.ಮೀ. ದೂರು ಇರುವಾಗಲೇ ಯೂಟರ್ನ್ ಆಕಾರದ ದೊಡ್ಡ-ದೊಡ್ಡ ತಿರುವುಗಳಿದ್ದು ಲಾಂಗ್ ಚಾರ್ಸಿ ಗಾಡಿಯಾಗಿದ್ದರಿಂದ ಈ ಅನಾಹುತ ಸಂಭವಿಸಿದೆ ಎಂದು ಹೇಳಲಾಗಿದೆ.

ಅಷ್ಟೆ ಅಲ್ಲದೆ, ದತ್ತಪೀಠ-ಮುಳ್ಳಯ್ಯನಗಿರಿ ಭಾಗದಲ್ಲಿ ಆಗಾಗ್ಗೆ ಮಳೆ ಕೂಡ ಸುರಿಯುತ್ತಿದ್ದು ಮಳೆಯಿಂದ ಗುಡ್ಡದ ಮಣ್ಣು ರಸ್ತೆಯಲ್ಲಿ ನಿಂತಿದ್ದ ಪರಿಣಾಮ ತಿರುವಿನಲ್ಲಿ ಬಸ್ ಟರ್ನ್ ಆಗುವಾಗ ಈ ಅವಘಡ ಸಂಭವಿದೆ ಎಂಬ ಮಾಹಿತಿ ಲಭ್ಯವಾಗಿದೆ. ಬಸ್ ರಸ್ತೆ ಬದಿಯ ಸುಮಾರು 50 ಅಡಿ ಆಳದ ಕಂದಕಕ್ಕೆ ಪಲ್ಟಿಯಾಗಿದೆ. ಬಸ್ಸಿನಲ್ಲಿದ್ದ ಡ್ರೈವರ್ ಸೇರಿ ಏಳು ಜನರಿಗೂ ಸಣ್ಣ-ಪುಟ್ಟ ಗಾಯಗಳಾಗಿವೆ. ವಿಷಯ ತಿಳಿದ ಕೂಡಲೇ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಗಾಯಾಳುಗಳನ್ನ ಆಸ್ಪತ್ರೆಗೆ ದಾಖಲಿಸಿದ್ದಾರೆ. ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!