ಕಾಫಿ ಮಂಡಳಿ ವಿರುದ್ಧ ಬೆಳೆಗಾರರ ಆಕ್ರೋಶ
ಚಿಕ್ಕಮಗಳೂರು :ಕಾಫಿ ಮಂಡಳಿಯ ವಿಭಾಗೀಯ ಕಛೇರಿಗಳ ಬಂದ್ ತೀರ್ಮಾನವನ್ನು ವಿರೋಧಿಸಿ ಜೆಡಿಎಸ್ ಕಾರ್ಯಕರ್ತರು ಹಾಗೂ ಕಾಫಿ ಬೆಳೆಗಾರರರು ಇಂದು ಕಾಫಿ ಮಂಡಳಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ರು.
ಜಿಲ್ಲೆಯಾಧ್ಯಂತ ಇರುವ ಕಾಫಿ ಮಂಡಳಿ ವಿಭಾಗೀಯ ಕಛೇರಿಗಳನ್ನು ಮುಚ್ಚುವ ಬಗ್ಗೆ ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಇದನ್ನು ವಿರೋಧಿಸಿ ಜೆಡಿಎಸ್ ಪಕ್ಷದ ರಾಜ್ಯ ಉಪಾಧ್ಯಕ್ಷ ಹೆಚ್.ಹೆಚ್ ದೇವರಾಜ್ ನೇತೃತ್ವದಲ್ಲಿ ಜೆಡಿಎಸ್ ಪಕ್ಷದ ಕಾರ್ಯಕರ್ತರು ಹಾಗೂ ಕಾಫಿ ಬೆಳೆಗಾರರು ಪ್ರತಿಭಟನೆ ನಡೆಸಿದರು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ದ ಘೋಷಣೆ ಕೂಗಿದ ಪ್ರತಿಭಟನಕಾರರು ಜಿಲ್ಲಾ ಪಂಚಾಯಿತಿ ಸಮೀಪ ಇರುವ ಕಾಫಿ ಮಂಡಳಿ ಕಛೇರಿಗೆ ಮುತ್ತಿಗೆ ಹಾಕಿದರು. ಅಕಾಲಿಕ ಮಳೆ, ಬೆಲೆ ಕುಸಿತದಿಂದ ತತ್ತರಿಸಿರುವ ಬೆಳೆಗಾರರ ಸಂಕಷ್ಟದ ನೆರವಿಗೆ ಬಾರದೆ ಕೇಂದ್ರ ಬಜೆಟ್ನಲ್ಲೂ ಕಾಫಿ ಬೆಳೆಗಾರರ ನಿರ್ಲಕ್ಷಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g