May 5, 2024

MALNAD TV

HEART OF COFFEE CITY

ಹೆಚ್ಚಿನ ಶುಲ್ಕ ಪಡೆಯುತ್ತಿರುವ ಖಾಸಗಿ ಶಾಲೆಗಳ ಕಡಿವಾಣಕ್ಕೆ ಕರವೇ ಆಗ್ರಹ

1 min read

ಚಿಕ್ಕಮಗಳೂರು : ಖಾಸಗಿ ಶಾಲೆಗಳಲ್ಲಿ ಪೋಷಕರಿಂದ ಹೆಚ್ಚಿನ ಶುಲ್ಕ ಪಡೆಯುತ್ತಿದ್ದು ಇದನ್ನು ಕೂಡಲೇ ನಿಲ್ಲಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ಕಾರ್ಯಕರ್ತರು ಇಂದು ಜಿಲ್ಲಾಧಿಕಾರಿ ಕಛೇರಿಯ ಒ.ಎ ರವರ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ನೀಡಿದ್ರು. ಕೋವಿಡ್ ಸಮಯದಲ್ಲಿ ಖಾಸಗಿ ಶಾಲೆಯವರು ಶಾಲೆಗಳನ್ನು ನಡೆಸದೆ, ಮೂರು ನಾಲ್ಕು ತಿಂಗಳುಗಳ ಕಾಲ ಶಾಲೆಯನ್ನು ನಡೆಸಿ ಈಗ ಪೋಷಕರಿಂದ ಪೂರ್ಣ ಪ್ರಮಾಣದ ಶುಲ್ಕ ವಸೂಲಿ ಮಾಡುತ್ತಿದ್ದಾರೆ. ಇದರಿಂದ ಕೋವಿಡ್ ಸಮಯದಲ್ಲಿ ಸರಿಯಾದ ಆದಾಯವಿಲ್ಲದ ಸಂಕಷ್ಟದಲ್ಲಿದ್ದ ಪೋಷಕರು ಈಗ ಹೆಚ್ಚಿನ ಶುಲ್ಕ ನೀಡಲು ಪರದಾಡುತ್ತಿದ್ದಾರೆ. ಕೂಡಲೇ ಜಿಲ್ಲಾಧಿಕಾರಿಗಳು ಮಧ್ಯ ಪ್ರವೇಶಿಸಿ ಹೆಚ್ಚಿನ ಶುಲ್ಕ ಪಡೆಯುತ್ತಿರುವ ಖಾಸಗಿ ಶಾಲೆಗಳ ವಿರುದ್ದ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷ ಒತ್ತಾಯಿಸಿದ್ರು. ಇದೇ ವೇಳೆ ಜೆನ್ನಿಕ್ಲಾಸ್ ಡೇವಿಡ್, ಶಿವಾನಂದ, ವಸಿಂ ಖಾನ್, ಮಂಜುನಾಥ್ ಮುಂತಾದವರಿದ್ದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!