ಸಿ ಪಿ ಐ ಕಾರ್ಯಕರ್ತರಿಂದ ಪ್ರತಿಭಟನೆ
1 min readಚಿಕ್ಕಮಗಳೂರು: ಸರ್ಕಾರ ಕೊಟ್ಟ ಭರವಸೆಗಳನ್ನು ಈಡೇರಿಸಿ, ಜನರ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದು ಸಿಪಿಐ ರಾಜ್ಯ ಸಹಕಾರ್ಯದರ್ಶಿ ಬಿ. ಅಮ್ಜದ್ ತಿಳಿಸಿದರು. ತರೀಕೆರೆ ತಾಲೂಕಿನ ಪ್ರವಾಸಿ ಮಂದಿರದಿಂದ ಹಿಡಿದು ತಾಲೂಕು ಕಚೇರಿ ಎದುರು ಪ್ರತಿಭಟನೆ ಮತ್ತು ಧರಣಿಯನ್ನು ಸಿ ಪಿ ಐ ಕಾರ್ಯಕರ್ತರ ನಡೆಸಿದರು.
ಪ್ರತಿಭಟನಾ ನಿರತರನ್ನು ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯದ ಜನತೆ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದ ಮೇಲೆ ಇಟ್ಟಿರುವ ನಂಬಿಕೆಯನ್ನು ಉಳಿಸಿಕೊಂಡು ಜನಪರ ಆಡಳಿತ ನೀಡಬೇಕು ಎಂದು ರಾಜ್ಯ ಸರ್ಕಾರವನ್ನು ಆಗ್ರಹಿಸಿದರು. ಸರ್ಕಾರ ಕೇವಲ ಗ್ಯಾರಂಟಿಗಳನ್ನು ಘೋಷಿಸಿ ಸುಮ್ಮನಿದ್ದರೆ ಸಾಲದು ರೈತ ಕಾರ್ಮಿಕರು, ವಿದ್ಯಾರ್ಥಿಗಳು, ಯುವಜನರು ಮಹಿಳೆಯರು ಎದುರಿಸುತ್ತಿರುವ ಸಮಸ್ಯೆಗಳ ಪರಿಹಾರಕ್ಕೆ ಆದ್ಯತೆ ನೀಡಬೇಕೆಂದು ಸಲಹೆ ನೀಡಿದರು. ರಾಜ್ಯದಲ್ಲಿ ಬಹುತೇಕ ವಿವಿಧ ಇಲಾಖೆಗಳಲ್ಲಿ ಖಾಲಿರುವ ಹುದ್ದೆಗಳನ್ನು ಭರ್ತಿ ಮಾಡಬೇಕಾಗಿದೆ. ಹಿಂದಿನ ಬಿಜೆಪಿ ಸರ್ಕಾರ ಜಾರಿಗೊಳಿಸಿರುವ ರೈತ ವಿರೋಧಿ, ಕಾರ್ಮಿಕ ವಿರೋಧಿ ಕಾನೂನು ತಿದ್ದುಪಡಿಗಳನ್ನು ಕೂಡಲೇ ವಾಪಸ್ಸು ಪಡೆಯಬೇಕು. ರಾಜ್ಯದಲ್ಲಿ ಈಗಾಗಲೇ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರದ್ದುಗೊಳಿಸುವ ಆಶ್ವಾಸನೆ ನೀಡಿರುವ ರಾಜ್ಯ ಸರ್ಕಾರ ಕೂಡಲೇ ರಾಜ್ಯ ಶಿಕ್ಷಣ ನೀತಿ ರೂಪಿಸಿ ಜಾರಿಗೊಳಿಸಲು ಮುಂದಾಗಬೇಕೆಂದು ಒತ್ತಾಯಿಸಿದರು.
ರಾಜ್ಯದ ಜನ ಉತ್ತಮ ಆರೋಗ್ಯ ಚಿಕಿತ್ಸೆ ಪಡೆಯಲು ಅಗತ್ಯವಾದ ಆಸ್ಪತ್ರೆಗಳು ಮತ್ತು ವೈದ್ಯರ ಕೊರತೆಯಲ್ಲಿ ಎದುರಿಸುತ್ತಿದ್ದು ಅವುಗಳನ್ನು ಭರ್ತಿ ಮಾಡಬೇಕು. ಸರ್ಕಾರ ಕೇವಲ ಐದು ಗ್ಯಾರಂಟಿಗಳ ಬಗ್ಗೆ ಎಷ್ಟೇ ಮಾತಾಡುತ್ತಿದೆ ಆದರೆ ಅಸಂಘಟಿತ ವಲಯದಲ್ಲಿ ದುಡಿಯುತ್ತಿರುವ ಅಂಗನವಾಡಿ ಬಿಸಿ ಊಟ ಆಶಾ ಕಾರ್ಯಕರ್ತೆಯರ ಗೌರವದನ ಹೆಚ್ಚಿಸುವ ಆರನೇ ಗ್ಯಾರೆಂಟಿಯ ಬಗ್ಗೆ ಮೌನ ತಾಳಿರುವುದರ ಸರ್ಕಾರದ ನಿಲುವಿನ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಸಿಪಿಐ ತಾಲೂಕು ಕಾರ್ಯದರ್ಶಿ ಮಹಮದ್ ಆಲಿ, ಸಿಪಿಐ ರಾಜ್ಯ ಮಂಡಳಿ ಸದಸ್ಯ ಕೆ. ಗುಣಶೇಖರ್, ಸಿಪಿಐ ಮುಖಂಡ ಸಿ. ಆರ್ ಬಸವರಾಜ್ ಸೇರಿದಂತೆ ಹಲವಾರು ನಾಯಕರು ಪ್ರತಿಭಟನೆಯಲ್ಲಿ ಪಾಲ್ಗೊಂಡು ತಹಶೀಲ್ದಾರ್ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g