May 9, 2024

MALNAD TV

HEART OF COFFEE CITY

ಪೊಲೀಸರಿಂದ ವಕೀಲರ ಮೇಲೆ ಹಲ್ಲೆ ವಿರೋಧಿಸಿ ವಕೀಲರ ಸಂಘದಿಂದ ಪ್ರತಿಭಟನೆ

1 min read

ಚಿಕ್ಕಮಗಳೂರು: ಹೆಲ್ಮೆಟ್ ಹಾಕದ ವಕೀಲರ ಮೇಲೆ ಪೊಲೀಸರ ಹಲ್ಲೆ ಪ್ರಕರಣ ಹಿನ್ನಲೆ ನ್ಯಾಯಕ್ಕಾಗಿ ಜಿಲ್ಲಾ ವಕೀಲರ ಸಂಘದಿಂದ ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಕೋರ್ಟ್ ಕಲಾಪದಿಂದ ದೂರ ಉಳಿದು ವಕೀಲರು ಪ್ರತಿಭಟನೆ ಮಾಡಿದರು. ಎಸ್ಪಿ ಹಾಗೂ ಪೊಲೀಸ್ ಇಲಾಖೆ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. 300 ಕ್ಕೂ ಹೆಚ್ಚು ವಕೀಲರು ಭಾಗಿಯಾಗಿದ್ದು, ನಗರದ ಎಸ್ಪಿ ಕಚೇರಿಗೆ ಬಿಗಿ ಪೊಲೀಸ್ ಬಂದೋಬಸ್ತ್ ಆಯೋಜಿಸಲಾಗಿದೆ.

ಎಸ್ಪಿ ಆಫೀಸ್ ಸುತ್ತಲೂ ಖಾಕಿ ಸರ್ಪಗಾವಲು ಆಯೋಜಿಸಲಾಗಿದ್ದು, ಎಸ್ಪಿ ಕಚೇರಿಗೆ 100ಕ್ಕೂ ಹೆಚ್ಚು ಪೊಲೀಸರಿಂದ ಬಂದೋಬಸ್ತ್ ನಿಯೋಜನೆಮಾಡಲಾಗಿದೆ. ಕೋರ್ಟಿನಿಂದ ಆಜಾದ ಪಾರ್ಕ್ ವೃತ್ತದವರಿಗೆ ವಕೀಲರ ಸಂಘ ಪ್ರತಿಭಟನಾ ಮೆರವಣಿಗೆ ನಡೆಸಿ ಎಸ್ಪಿ ಕಚೇರಿ ಬಳಿ ಎಸ್ಪಿ ವಿರುದ್ಧ ಹಿಗ್ಗಾಮುಗ್ಗಾ ಘೋಷಣೆ ಮಾಡಿದ್ದಾರೆ. ಆರೋಪಿಗಳನ್ನ ಬಂಧಿಸೋವರೆಗೂ ಹೋರಾಟ ಮುಂದುವರಿಸೋದಾಗಿ ತೀರ್ಮಾನ ಮಾಡಿದ್ದಾರೆ. 

ಹೆಲ್ಮೆಟ್ ಹಾಕಿಲ್ಲ ಎಂದು ಚಿಕ್ಕಮಗಳೂರು ನಗರ ಪೊಲೀಸರು ವಕೀಲರ ಮೇಲೆ ಮನಸ್ಸೋ ಇಚ್ಛೆ ಹಲ್ಲೆ ನಡೆಸಿದ್ದ ಆರೋಪದಡಿ ಚಿಕ್ಕಮಗಳೂರು ಎಸ್ಪಿ ವಿಕ್ರಂ ಅಮಟೆ ಆರು ಜನ ನಗರ ಠಾಣಾ ಪೊಲೀಸರನ್ನ ಅಮಾನತು ಮಾಡಿದ್ದಾರೆ. ಓರ್ವ ಪಿಎಸ್‍ಐ, ಓರ್ವ ಎ.ಎಸ್.ಐ. ಓರ್ವ ಹೆಡ್ ಕಾನ್ಸಟೇಬಲ್ ಸೇರಿದಂತೆ ಮೂವರು ಪೇದೆಗಳನ್ನ ಅಮಾನತು ಮಾಡಿದ್ದಾರೆ. ಗುರುವಾರ ರಾತ್ರಿ 8 ಗಂಟೆ ವೇಳೆಗೆ ನಗರದ ಮಾರ್ಕೆಟ್ ರಸ್ತೆಯಲ್ಲಿ ನಗರ ಠಾಣೆ ಮುಂಭಾಗ ಯುವ ವಕೀಲ ಪ್ರೀತಂ ಹೆಲ್ಮೆಟ್ ಹಾಕದೆ ಬೈಕಿನಲ್ಲಿ ಹೋಗುತ್ತಿದ್ದರು. ವಕೀಲನನ್ನ ಪ್ರಶ್ನಿಸಿದ ಪೊಲೀಸರು ಹಾಗೂ ವಕೀಲನ ಮಧ್ಯೆ ಮಾತಿನ ಚಕಮಕಿ ನಡೆದಿದೆ. ಬೈಕಿನ ಕೀ ಏಕೆ ತೆಗೆಯುತ್ತೀರಾ ಎಂದು ಪ್ರಶ್ನಿಸಿದ ವಕೀಲ ದಂಡ ಕಟ್ಟುತ್ತೇನೆ ಎಂದು ಪೊಲೀಸರ ಜೊತೆ ಮಾತಿನ ಚಕಮಕಿ ನಡೆಸಿದ್ದಾರೆ. ಠಾಣೆ ಎದುರೇ ಘಟನೆ ನಡೆದಿದ್ದರಿಂದ ಪೊಲೀಸರು ಆತನನ್ನ ಠಾಣೆಗೆ ಕರೆದೊಯ್ದು ಮನಸ್ಸೋ ಇಚ್ಛೆ ಹಲ್ಲೆ ಮಾಡಿದ್ದಾರೆಂದು ವಕೀಲರ ಸಂಘ ಆರೋಪಿಸಿದೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!