May 17, 2024

MALNAD TV

HEART OF COFFEE CITY

ವಿದ್ಯಾರ್ಥಿ ವೇತನಕ್ಕಾಗಿ ಪ್ರತಿಭಟನೆ

1 min read

ಚಿಕ್ಕಮಗಳೂರು : ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡದೆ ವಿದ್ಯಾರ್ಥಿ ಭವಿಷ್ಯದೊಂದಿಗೆ ಚೆಲ್ಲಾಟವಾಡುತ್ತಿರುವ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ A.I.T ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಚಿಕ್ಕಮಗಳೂರು ಶಾಖೆ ವತಿಯಿಂದ SC-ST-OBC ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ನೀಡದೆ ಚೆಲ್ಲಾಟವಾಡುತ್ತಿರುವ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿ ಇಂದು ನಗರದ I.D.S.G ಕಾಲೇಜಿಂದ A.I.T ವೃತ್ತದವರಿಗೆ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಯಿತು.
ಮಾಧ್ಯಮವದರೊಂದಿಗೆ ಮಾತನಾಡಿದ ಎಬಿವಿಪಿ ನಗರ ಕಾರ್ಯದರ್ಶಿ ರಾಕೇಶ್, ವಿದ್ಯಾರ್ಥಿ ವೇತನವನ್ನೇ ನಂಬಿರುವ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ ಎರಡು ಮೂರು ವರ್ಷಗಳೇ ಕಳೆದರು ರಾಜ್ಯ ಸರ್ಕಾರ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಿರುವುದಿಲ್ಲ. ಆದರು ಮತ್ತೊಮ್ಮೆ ವಿದ್ಯಾರ್ಥಿ ವೇತನ ನೀಡಲು ರಾಜ್ಯ ಸರ್ಕಾರ ಅರ್ಜಿಯನ್ನು ಕರೆದಿದೆ. ಈಗಾಗಲೇ ಬಹಳಷ್ಟು ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಕೊನೆಯ ಹಂತದಲ್ಲಿದ್ದು, ಗ್ರಾಮೀಣ ಭಾಗದ, ಬಡ ಕುಟುಂಬದ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನವನ್ನೇ ನಂಬಿದ್ದಾರೆ. ರಾಜ್ಯ ಸರ್ಕಾರ ಕೂಡಲೇ ಎರಡು ಮೂರು ವರ್ಷಗಳೆ ಹಿಂದೆ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ಸಮರ್ಪಕವಾಗಿ ವಿತರಣೆ ಮಾಡಬೇಕು. ತಪ್ಪಿದಲ್ಲಿ ರಾಜ್ಯಾಧ್ಯಂತ ಉಗ್ರ ಹೋರಾಟಕ್ಕೆ ಕರೆ ನೀಡಲಾಗುವುದೆಂದು ಹೇಳಿದರು.

ಪತ್ರಿಕೋದ್ಯಮ ವಿದ್ಯಾರ್ಥಿ ಚೈತ್ರ ಮಾತನಾಡಿ ಮೂರು ವರ್ಷಗಳಿಂದ ಸರ್ಕಾರದಿಂದ ಬರುವ ಸ್ಕಾಲರ್ಶಿಪ್ ನಮಗೆ ಬರುತ್ತಿಲ್ಲ. ಆ ಸ್ಕಾಲರ್ಶಿಪ್ ನನ್ನ ನಂಬಿ ಎಷ್ಟೋ ವಿದ್ಯಾರ್ಥಿಗಳು ಕಾಲೇಜಿಗೆ ಬರುತ್ತಾರೆ ಆದ್ದರಿಂದ ಸರ್ಕಾರವು ಸಮರ್ಪಕವಾಗಿ ವಿದ್ಯಾರ್ಥಿ ವೇತನವನ್ನು ಕೊಡಬೇಕು ಎಂದು ಆಗ್ರಹಿಸಿದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!