May 16, 2024

MALNAD TV

HEART OF COFFEE CITY

3 ತಿಂಗಳ ಒಳಗೆ ಗ್ಯಾರಂಟಿ ಜಾರಿ ಮಾಡದಿದ್ದಾರೆ ಜೆ.ಡಿ.ಎಸ್‌ನಿಂದ ಪ್ರತಿಭಟನೆ : ಸುಧಾಕರಶೆಟ್ಟಿ

1 min read

ಚಿಕ್ಕಮಗಳೂರು-ವಿಧಾನ ಸಭಾ ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷ ಮತದಾರರಿಗೆ ಕೊಟ್ಟ ಗ್ಯಾರಂಟಿ ಭರವಸೆಗಳನ್ನು ಸರ್ಕಾರ ಅಸ್ಥಿತ್ವಕ್ಕೆ ಬಂದ ಬಳಿಕ ಅನುಷ್ಠಾನಕ್ಕೆ ತರಲು ಹಲವಾರು ನಿಬಂಧನೆಗಳನ್ನು ವಿಧಿಸುತ್ತಿರುವುದನ್ನು ಜನತಾದಳ ರಾಜ್ಯ ಉಪಾಧ್ಯಕ್ಷ ಸುಧಾಕರಶೆಟ್ಟಿ ಖಂಡಿಸಿದರು.
ಅವರು ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ 5 ಗ್ಯಾರಂಟಿಗಳನ್ನು ಕೊಡುವಾಗ ಯಾವುದೇ ನಿಬಂಧನೆ ವಿಧಿಸದೆ ಈಗ ಅಧಿಕಾರಕ್ಕೆ ಬಂದ ನಂತರ ನಿಬಂಧನೆಗಳನ್ನು ವಿಧಿಸುತ್ತಿರುವುದು ಸರಿಯಲ್ಲ ಭರವಸೆಗಳನ್ನು ಜನರಿಗೆ ಯಥಾವತ್ತಾಗಿ ಜಾರಿ ಮಾಡಬೇಕೆಂದು ಆಗ್ರಹಿಸಿದರು.
ಈಗಾಗಲೇ ರಾಜ್ಯದಲ್ಲಿ ಗೃಹಲಕ್ಷಿö್ಮ ಯೋಜನೆ ವ್ಯಾಪ್ತಿಗೆ 2 ಕೋಟಿ 13 ಲಕ್ಷ ಮನೆಗಳು ಬರುತ್ತದೆ ಆದರೆ ಮನೆ ಯಜಮಾನಿ ಬ್ಯಾಂಕ್ ಖಾತೆಗೆ 2 ಸಾವಿರ ರೂ. ಜಮಾ ಮಾಡುವುದಾಗಿ ಹೇಳಿದ್ದ ಕಾಂಗ್ರೆಸ್ ಅನುಷ್ಠಾನಕ್ಕೆ ತರುವಾಗ ಇಲ್ಲದ ನಿಬಂಧನೆಗಳನ್ನು ವಿಧಿಸಿ ಸೌಲಭ್ಯದಿಂದ ಜನರು ವಂಚಿತರಾಗುವAತೆ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಜಿಎಸ್‌ಟಿ ನೊಂದಣಿ ಮಾಡಿದವರಿಗೆ ಹಾಗೂ ಆದಾಯ ತೆರಿಗೆ ಪಾವತಿಸುವವರನ್ನು ಗೃಹಲಕ್ಷಿö್ಮ ಯೋಜನೆ ವ್ಯಾಪ್ತಿಯಿಂದ ಕೈ ಬಿಡಲು ಹುನ್ನಾರ ನಡೆಸುತ್ತಿದ್ದಾರೆ ಆದರೆ ಚುನಾವಣೆ ಸಂದರ್ಭದಲ್ಲಿ ಯಾವುದೇ ಷರತ್ತುಗಳಿಲ್ಲದೆ 5 ಗ್ಯಾರಂಟಿ ಜಾರಿ ಮಾಡುತ್ತೇವೆ ಎಂದಿದ್ದು ಜಿಎಸ್‌ಟಿ ನೊಂದಣಿ ಆದವರು ಶ್ರೀಮಂತರೆAಬ ಭಾವನೆ ಸರ್ಕಾರಕ್ಕಿದೆ ಎಂದು ಟೀಕಿಸಿದರು.
ರಾಜ್ಯ ಸರ್ಕಾರ ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಜಾರಿ ಮಾಡಿದ್ದು, ಆದರೆ ಪಾಸ್ ಪಡೆದವರಿಗೆ ಮಾತ್ರ ಉಚಿತ ಬಸ್ ಪ್ರಯಾಣ ಎಂಬ ನಿಬಂಧನೆಯನ್ನು ಕೈಬಿಟ್ಟು ಕೂಡಲೇ ಎಲ್ಲಾ ವರ್ಗದ ಮಹಿಳೆಯರಿಗೆ ಈ ಸೌಲಭ್ಯ ಕಲ್ಪಿಸಬೇಕೆಂದು ಒತ್ತಾಯಿಸಿದರು.
ಅನ್ನಭಾಗ್ಯ ಯೋಜನೆಯಡಿ ತಲಾ 10 ಕೆ.ಜಿ ಅಕ್ಕಿ ಕೊಡುತ್ತೇವೆಂದು ಭರವಸೆ ಕೊಟ್ಟಿದ್ದು ಈಗ ಕೊಡಲು ಕೇಂದ್ರ ಸರ್ಕಾರ ನಮಗೆ ಅಕ್ಕಿ ಕೊಡುತ್ತಿಲ್ಲ ಎಂಬ ದೂರು ಹೇಳುವುದು ಸರಿಯಲ್ಲ ಘೋಷಣೆಗೆ ಮುನ್ನ ಸಾಧಕ-ಭಾದಕಗಳ ಬಗ್ಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಬೇಕಿತ್ತು ಈಗಾಗಲೇ ರಾಜ್ಯದಲ್ಲಿ ಒಟ್ಟು 1.7 ಕೋಟಿ ಬಿಪಿಎಲ್ ಕುಟುಂಬಗಳಿವೆ ಎಲ್ಲರಿಗೂ ಕೊಟ್ಟ ಮಾತಿನಂತೆ ಅಕ್ಕಿ ವಿತರಿಸಬೇಕೆಂದು ಆಗ್ರಹಿಸಿದರು.
ನಿರುದ್ಯೋಗ ಪದವೀಧರರಿಗೆ 3 ಸಾವಿರ ಕೊಡುತ್ತೇವೆಂದು ಹೇಳಿ ಈ ಬಗ್ಗೆ ಚಕಾರವೆತ್ತುತ್ತಿಲ್ಲ ಕೂಡಲೇ ಈ ಹಣವನ್ನು ನಿರುದ್ಯೋಗಿಗಳ ಖಾತೆಗೆ ಜಮಾ ಮಾಡಬೇಕು ನಿರುದ್ಯೋಗ ಸಮಸ್ಯೆ ಬೃಹದಾಕಾರವಾಗಿದ್ದು ರಾಜ್ಯದಲ್ಲಿ 1.90 ಕೋಟಿ ನಿರುದ್ಯೋಗಿಗಳಿದ್ದಾರೆ ಎಂದು ಮಾಹಿತಿ ನೀಡಿದರು.
ಸರ್ಕಾರದ ಮಹಿಳೆಯರಿಗೆ ಉಚಿತ ಪ್ರಯಾಣ ಘೋಷಿಸಿದ್ದರಿಂದ ಶಾಲಾ ವಿದ್ಯಾರ್ಥಿಗಳು ತುಂಬಾ ತೊಂದರೆ ಅನುಭವಿಸುವಂತಾಗಿದೆ. ವಿಶೇಷವಾಗಿ ಶೃಂಗೇರಿ ತಾಲ್ಲೂಕಿನಲ್ಲಿ ಈ ಸಮಸ್ಯೆ ಹೆಚ್ಚಿದ್ದು ಸರ್ಕಾರಿ ಬಸ್ ವ್ಯವಸ್ಥೆ ಇಲ್ಲ ಖಾಸಗಿ ಬಸ್‌ಗಳು ಸಂಚರಿಸುವ ಮಾರ್ಗದಲ್ಲಿ ಸರ್ಕಾರಿ ಬಸ್ ಸೌಲಭ್ಯ ಕಲ್ಪಿಸಬೇಕು ಜೊತೆಗೆ ಶಿಕ್ಷಣ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ನೌಕರರಿಗೆ ಹಾಗೂ ವಿದ್ಯಾರ್ಥಿಗಳಿಗೆ ಬಸ್‌ಗಳ ಸೌಲಭ್ಯ ಒದಗಿಸಬೇಕೆಂದು ಒತ್ತಾಯಿಸಿದರು.
ಸರ್ಕಾರ ಜನರಿಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವಂತೆ ಆದ್ಯ ಗಮನ ನೀಡಬೇಕು, ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸಬೇಕು ಗ್ಯಾರಂಟಿಗಳ ಜಾರಿಗೆ ಸಂಪನ್ಮೂಲ ಕ್ರೂಢೀಕರಿಸಲು ಕಾಲಹರಣ ಮಾಡದೆ ಎಲ್ಲಾ ಸೌಲಭ್ಯಗಳನ್ನು ನೀಡಲು ಗಂಭೀರವಾಗಿ ಪರಿಗಣಿಸಬೇಕೆಂದು ಆಗ್ರಹಿಸಿದರು.
90 ದಿನಗಳ ಒಳಗೆ ನಿಮ್ಮ ಎಲ್ಲಾ ಗ್ಯಾರಂಟಿಗಳನ್ನು ಸಂಪೂರ್ಣ ಜಾರಿ ಮಾಡದಿದ್ದರೆ ತಾಲ್ಲೂಕು ಹೋಬಳಿ ಮಟ್ಟದಲ್ಲಿ ಸರ್ಕಾರದ ವಿರುದ್ದ ಜೆ.ಡಿ.ಎಸ್ ಪ್ರತಿಭಟನೆ ಹಮ್ಮಿಕೊಳ್ಳುತ್ತದೆ ಎಂದು ಎಚ್ಚರಿಸಿದರು.
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪಕ್ಷ ಕೊಡುವ ನಿರ್ಧಾರಕ್ಕೆ ಬದ್ದನಾಗಿದ್ದು ಈ ಚುನಾವಣೆಯಲ್ಲಿ ಯಾವುದೇ ಪಕ್ಷದೊಂದಿಗೆ ಜೆ.ಡಿ.ಎಸ್ ಹೋಂದಾಣಿಕೆ ಮಾಡಿಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!