ಭಾರತ್ ಬಂದ್ ಜನರ ನೀರಸ ಪ್ರತಿಕ್ರಿಯೆ ರೈತ ಸಂಘಟನೆಗಳಿಂದ ಪ್ರತಿಭಟನೆ ಬೆಂಬಲ
1 min readಚಿಕ್ಕಮಗಳೂರು : ಸಂಯುಕ್ತ ರೈತ ಹೋರಾಟ ಸಮಿತಿ ಕರೆ ನೀಡಿದ್ದ ಭಾರತ್ ಬಂದ್ ಗೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಎಲ್ಲೂ ಬೆಂಬಲ ವ್ಯಕ್ತವಾಗಿಲ್ಲ , ಎಲ್ಲೆಡೆ ಅಂಗಡಿ ಮುಂಗಟ್ಟುಗಳು ಪ್ರತಿನಿತ್ಯದಂತೆ ತೆರೆದಿದ್ದವು ರ್ಕಾರಿ ಕಚೇರಿಗಳು ತೆರೆದಿದ್ದರೆ, ರೈತ ಸಂಘ, ಹಸಿರು ಸೇನೆ ಐಕ್ಯ ಸಮಿತಿಯ ರೈತರು ಪ್ರತಿಭಟನಾ ಮೆರವಣಿಗೆ ನಡೆಸಿದರು
ರೈತ ಸಂಯುಕ್ತ ಹೋರಾಟ ಸಮಿತಿ ಕರೆ ನೀಡಿದ್ದ ಭಾರತ್ ಬಂದ್ ಗೆ ಚಿಕ್ಕಮಗಳೂರಿನಲ್ಲಿಯು ರೈತ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿದೆ. ಯಾವುದೇ ಬಂದ್ ಮಾಡಿಸದಿದ್ದರು ಪ್ರತಿಭಟನೆ ನಡೆಸುವ ಮೂಲಕ ತಮ್ಮ ಬೆಂಬಲ ಸೂಚಿಸಿದೆ. ನಗರದ ತಾಲೂಕು ಕಛೇರಿಯಿಂದ ರಾಜ್ಯರೈತ ಸಂಘ ಹಸಿರು ಸೇನೆ ಐಕ್ಯ ಹೋರಾಟ ಸಮಿತಿ ಹಾಗೂ ವಿವಿಧ ರೈತ ಸಂಘಟನೆಗಳ ಕಾಯ೯ಕತ೯ರು ಮೆರವಣಿಗೆ ಹೊರಟು ಕೇಂದ್ರ ಸಕಾ೯ರದ ವಿರುದ್ಧ ಘೋಷಣೆ ಕೂಗಿದರು. ರೈತ ಮುಖಂಡ ರಾಕೇಶ್ ಟಿಕಾಯತ್ ವಿರುದ್ಧ ದಾಖಲಿಸಿರುವ FIR ಹಿಂಪಡೆಯುವಂತೆ ಹಾಗೂ ಮೂರು ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ಆಜಾದ್ ವೃತ್ತದ ವರೆಗೂ ಮೆರೆವಣಿಗೆ ಸಾಗಿ ಅಕ್ರೋಶ ವ್ಯಕ್ತಪಡಿಸಿದರು
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g