May 19, 2024

MALNAD TV

HEART OF COFFEE CITY

ಅಗ್ನಿಪರೀಕ್ಷೆಯಲ್ಲಿ ಪಕ್ಷ ನಿಷ್ಠೆ ಸಾಬೀತುಪಡಿಸಿ : ಸಿ.ಟಿ. ರವಿ

1 min read

ಕಡೂರು : ಚಿಕ್ಕಮಗಳೂರು ಜಿಲ್ಲೆಯಲ್ಲಿ ಕುಮರಸ್ವಾಮಿಯವರೇ ಪಕ್ಷವನ್ನು ಕಟ್ಟಿದ್ದು ಎಂದು ಒಪ್ಪಿಕೊಳ್ಳುತ್ತೇನೆ ಈ ಪಕ್ಷದ ಗೆಲುವಿಗೆ ಸಹಕಾರ ನೀಡಲಿ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಹೇಳಿದರು.

ಕಡೂರು ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಬೆಳ್ಳಿ ಪ್ರಕಾಶ್ ನಾಮಪತ್ರ ಸಲ್ಲಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಿ.ಟಿ. ರವಿ ಸುದ್ದಿಗಾರರೊಂದಿಗೆ ಮಾತನಾಡುತ್ತ, ಎಂ.ಪಿ. ಕುಮಾರಸ್ವಾಮಿಯವರು ಪಕ್ಷದಿಂದ ಅನುಕೂಲವನ್ನು ಪಡೆದಿದ್ದಾರೆ. ನಾನು ಅವರಲ್ಲಿ ವಿನಂತಿ ಮಾಡಿಕೊಳ್ಳುತ್ತೇನೆ. ನಾವು ವ್ಯಕ್ತಿಗಿಂತ ಪಕ್ಷ ದೊಡ್ಡದು, ಪಕ್ಷಕ್ಕಿಂತ ದೇಶ ದೊಡ್ಡದು ಎನ್ನುವುದನ್ನು ನಾವು ನೀವೆಲ್ಲರೂ ಮಾತನಾಡಿದ್ದೀರಿ. ಈಗ ಅಗ್ನಿಪರೀಕ್ಷೆ ನಿಮ್ಮತ್ರ ಬಂದಾಗ ವ್ಯಕ್ತಿಗಿಂತ ಪಕ್ಷ ದೊಡ್ಡದು, ಪಕ್ಷಕ್ಕಿಂತ ದೇಶ ದೊಡ್ಡದು ಎನ್ನುವುದನ್ನು ಸಾಭೀತು ಪಡಿಸಲು ಇರುವ ಒಳ್ಳೆ ಸಕಾಲ. ಅದಕ್ಕಾಗಿ ಪಕ್ಷಕ್ಕಿಂತ ದೇಶ ದೊಡ್ಡದು ಎನ್ನುವುದನ್ನು ಗಮನದಲ್ಲಿಟ್ಟುಕೊಂಡು ಸಹಕಾರ ಕೊಡಬೇಕೆಂದು ವಿನಂತಿ ಮಾಡುತ್ತೇನೆ. ಚುನಾವಣೆಯಲ್ಲಿ ಟಿಕೆಟ್ ತಪ್ಪಿದೆ ಎಂದ ಮಾತ್ರಕ್ಕೆ ತಮ್ಮ ರಾಜಕೀಯ ಮುಗಿದಿದೆ ಎಂದು ಭಾವಿಸಬಾರದು. ನೀವು ಪಕ್ಷ ನಿಷ್ಠೆ ಇಟ್ಟುಕೊಂಡು ಪಕ್ಷದ ಅಭ್ಯರ್ಥಿಯ ಗೆಲುವಿಗೆ ಸಹಕರಿಸಿದರೆ ನಿಮಗೆ ಹೊಸ ರೀತಿಯ ದಾರಿ ಸೃಷ್ಠಿಯಾಗಬಹುದು, ಆಗಾಗಿ ಹೊಸ ದಾರಿ ಹುಡುಕಿಕೊಳ್ಳಿ, ಇಲ್ಲಿ ಪಕ್ಷದ ಜೊತೆಗಿದ್ದು, ಪಕ್ಷವನ್ನು ಗೆಲ್ಲಿಸಿ ಎಂದು ವಿನಂತಿಸಿಕೊಳ್ಳುತ್ತೇನೆ ಎಂದು ಹೇಳಿದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!