ಡೆಂಗ್ಯೂಗೆ ಪಿ.ಯು ಕಾಲೇಜು ಯುವತಿ ಬಲಿ
1 min read
ಕಾಲೇಜು ವಿದ್ಯಾರ್ಥಿನಿಯೊಬ್ಬಳು ಡೆಂಗ್ಯೂ ಕಾಯಿಲೆಯಿಂದ ಮೃತಪಟ್ಟಿದ್ದಾಳೆ. ನಗರದ ಮಹಮ್ಮದ್ ಖಾನ್ ಗಲ್ಲಿ ನಿವಾಸಿ ಸಹರಾ ಬಾನು ಡೆಂಗ್ಯೂಗೆ ಬಲಿಯಾದ ಯುವತಿ
ಚಿಕ್ಕಮಗಳೂರಿನ ಎಂಇಎಸ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಸಹರಾ ಬಾನು (18) ಎಂಬ ಪಿಯುಸಿ ವಿದ್ಯಾರ್ಥಿನಿ ಡೆಂಗ್ಯೂ ಕಾಯಿಲೆಗೆ ಬಲಿಯಾಗಿದ್ದಾಳೆ. ಕಳೆದ ಎರಡು ತಿಂಗಳಿಂದ ಜ್ವರದಿಂದ ಬಳಲುತ್ತಿದ್ದ ಸಹರಾ ನಿನ್ನೆ ಸಂಜೆ ಸಾವಿಗೀಡಾಗಿದ್ದಾಳೆ. ಮಹಮ್ಮದ್ ಗಲ್ಲಿಯಲ್ಲಿ ಕಳೆದ ನಾಲ್ಕು ತಿಂಗಳ ಹಿಂದೆ ಯುಜಿಡಿ ಪೈಪ್ ಬದಲಾವಣೆ ಮಾಡಲು ರಸ್ತೆ ಅಗೆದ ರಸ್ತೆ ಕ್ಲಿಯರ್ ಮಾಡದೇ ಚರಂಡಿಯಲ್ಲಿ ಮಣ್ಣು, ಕಸ, ಕಡ್ಡಿ, ಕೊಳಚೆ ತುಂಬಿದ್ದು ಡೆಂಗ್ಯೂ ಹರಡಲು ಕಾರಣ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇವತ್ತಿಗೂ ಈ ರಸ್ತೆ ಇನ್ನೂ ಸಂಪೂರ್ಣವಾಗಿ ಕ್ಲಿಯರ್ ಆಗಿಲ್ಲದಿರುವುದಕ್ಕೆ ಕೆಲಸ ವಹಿಸಿಕೊಂಡ ಕಂಟ್ರಾಕ್ಟರ್ ವಿರುದ್ಧ ದೂರು ನೀಡಿದಾಗ ಬೇಕಾಬಿಟ್ಟಿ ಬಂದು ಅರ್ಧಂಬರ್ಧ ಕೆಲಸ ನಿರ್ವಹಿಸಿದ್ದಾರೆ ಎಂಬ ಆರೋಪ ಕೂಡಾ ಕೇಳಿ ಬಂದಿದೆ. ಮೃತಪಟ್ಟಿರುವ ಯುವತಿಯ ಅಕ್ಕಪಕ್ಕದ ಮನೆಯವರು ಕೂಡ ಕಸ ಕಡ್ಡಿಯನ್ನು ರಸ್ತೆಗೆ ಬಿಸಾಕುವ ಪರಿಪಾಠ ಹೊಂದಿರುವುದು ಸಹಾ ಕಾಯಿಲೆ ಹರಡಲು ಕಾರಣ ಎನ್ನಲಾಗಿದೆ. ಇಲ್ಲಿನ ನಗರಸಭಾ ಸದಸ್ಯರು ಕೂಡ ಎಷ್ಟು ಬಾರಿ ಹೇಳಿದರೂ ಕೂಡ ನಿವಾಸಿಗಳು ಕಸವನ್ನು ಚರಂಡಿಗೆ ತಂದು ಸುರಿಯುತ್ತಾರೆ. ನಗರಸಭೆ ಕಟ್ಟುನಿಟ್ಟಿದ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಹೇಳುತ್ತಾರೆ.
ಯುವತಿ ಸಾವನ್ನಪ್ಪಿದ ವಿಷಯ ತಿಳಿಯುತ್ತಿದ್ದಂತೆ ನಗರಸಭೆ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್ ಮೃತರ ಮನೆಗೆ ತೆರಳಿ ಸಹರಾ ಬಾನು ಅಂತಿಮ ದರ್ಶನ ಪಡೆದು ಮನೆಯವರಿಗೆ ಸಾಂತ್ವಾನ ಹೇಳಿದರು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g