ಪ್ರೇಮ ವೈಫಲ್ಯ, ವಿಷ ಸೇವಿಸಿ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ
1 min readಪ್ರೇಮ ವೈಪಲ್ಯದಿಂದ ಅಪ್ರಾಪ್ತ ಯುವತಿಯೋರ್ವಳು ಕಳೆನಾಶಕ ಸೇವೆಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಸಂಸೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜೋಗಿಕುಂಬ್ರಿ ಗ್ರಾಮದಲ್ಲಿ ನಡೆದಿದೆ. ಮೃತಳನ್ನ 17 ವರ್ಷದ ದೀಪ್ತಿ ಎಂದು ಗುರುತಿಸಲಾಗಿದೆ. ಮೃತ ದೀಪ್ತಿ ಕಳಸ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದಳು. ಮೃತ ದೀಪ್ತಿ ಸಂಸೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಸ್.ಕೆ.ಮೇಗಲ್ ಗ್ರಾಮದ ನಿತೇಶ್ ಎಂಬುವನನ್ನ ಪ್ರೀತಿಸುತ್ತಿದ್ದಳು. ಆತ ಮೋಸ ಮಾಡಿದ್ದಾನೆ ಎಂದು ಜನವರಿ 10ರಂದು ಕಾಲೇಜಿನಿಂದ ಮನೆಗೆ ಬಂದ ದೀಪ್ತಿ ಮನೆಯಲ್ಲಿದ್ದ ಕಳೆನಾಶಕ ಸೇವಿಸಿದ್ದಾಳೆ. ವಿಷ ಸೇವಿಸಿದ ಬಳಿಕ ಮನೆಯಲ್ಲಿದ್ದ ಅಪ್ಪ-ಅಮ್ಮನಿಗೆ ವಿಷಯ ತಿಳಿಸಿದ್ದಾಳೆ. ಕೂಡಲೇ ಕಳಸ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಎ.ಜೆ.ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ನಾಲ್ಕು ದಿನಗಳ ಕಾಲ ಸಾವು-ಬದುಕಿನ ಮಧ್ಯೆ ಹೋರಾಡಿದ ದೀಪ್ತಿ ಶನಿವಾರ ಸಂಜೆ ಸಾವನ್ನಪ್ಪಿದ್ದಾಳೆ. ಸಾಯುವ ಮುನ್ನ ಆಕೆಯ ನಾನು ನಿತೇಶ್ನನ್ನ ಪ್ರೀತಿಸುತ್ತಿದ್ದೆ. ನಮ್ಮಿಬ್ಬರ ಮಧ್ಯೆ ಜಗಳದಿಂದಾಗಿ ನಾನು ಈ ತೀರ್ಮಾನಕ್ಕೆ ಬಂದಿದ್ದೇನೆ ಎಂದು ಬರೆದಿದ್ದಾಳೆ. ಈ ಬಗ್ಗೆ ಮೃತ ದೀಪ್ತಿ ಪೋಷಕರು ಕುದುರೆಮುಖ ಠಾಣೆಯಲ್ಲಿ ದೂರು ನೀಡಿದರು ಆರಂಭದಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿಲ್ಲ ಎಂದು ನೊಂದ ಪೋಷಕರು ಆರೋಪಿಸಿದ್ದಾರೆ. ಎಸ್ಪಿ ತರಾಟೆಗೆ ತೆಗೆದುಕೊಂಡ ಬಳಿ ಕುದರೆಮುಖ ಪೊಲೀಸರು ನಿತೇಶ್ ದೂರನ್ನ ಸ್ವೀಕರಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆದರೆ, ಪ್ರಕರಣ ದಾಖಲಿಸಿಕೊಂಡ ಪೊಲೀಸರು ನಿತೇಶ್ನನ್ನ ಬಂಧಿಸಿಲ್ಲ ಎಂದು ಯುವತಿ ಪೋಷಕರು ಪೊಲೀಸರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಇದೀಗ, ನಿತೇಶ್ ವಿರುದ್ಧ ಕುದುರೆಮುಖ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g