May 3, 2024

MALNAD TV

HEART OF COFFEE CITY

ರಾಹುಲ್ ಗಾಂಧಿಗೆ ಚಿಕಿತ್ಸೆ ಅಗತ್ಯವಿದೆ ಶೋಭಾ ಕರಂದ್ಲಾಜೆ ವ್ಯಂಗ್ಯ

1 min read

ಚಿಕ್ಕಮಗಳೂರು : ಬ್ರಿಟಿಷರನ್ನ ಓಡಿಸಿದವರಿಗೆ ಮೋದಿ ಓಡಿಸೋದು ಕಷ್ಟವಲ್ಲ, ಎಂಬ ರಾಹುಲ್ ಹೇಳಿಕೆಗೆ ಚಿಕ್ಕಮಗಳೂರಿನಲ್ಲಿ ಸಂಸದೆ ಶೋಭಾ ಕರಂದ್ಲಾಜೆ ವ್ಯಂಗ್ಯವಾಡಿದ್ದಾರೆ. ರಾಹುಲ್ ಗಾಂಧಿಗೆ ಚಿಕಿತ್ಸೆಯ ಅಗತ್ಯವಿದೆ. ರಾಹುಲ್ ಗಾಂಧಿ ಕಾಲಿಟ್ಟಲ್ಲೆಲ್ಲಾ ಕಾಂಗ್ರೆಸ್ ನೆಲಕಚ್ಚುತ್ತಿದ್ದು, ೪ ರಾಜ್ಯಗಳ ಚುನಾವಣೆಯಲ್ಲೂ ಕಾಂಗ್ರೆಸ್ಸಿಗೆ ಸೋಲು ಕಟ್ಟಿಟ್ಟ ಬುತ್ತಿಯಾಗಿದ್ದು ಪದೇ-ಪದೇ ಸೋಲುವುದುರಿಂದ ಕಾಂಗ್ರೆಸ್ಸಿಗರಿಗೆ ಬುದ್ಧಿ ಭ್ರಮಣೆಯಾಗಿದೆ ಎಂದ ಶೋಭ, ರಾಹುಲ್ ಗಾಂಧಿಗೆ ಚಿಕಿತ್ಸೆಯ ಅಗತ್ಯವಿದೆ ಎಂದು ನನಗೆ ಅನ್ನಿಸುತ್ತೆ ನೀವು ಲೋಕಸಭೆಯಲ್ಲಿ ಅಧಿಕೃತ ವಿರೋಧ ಪಕ್ಷವಾಗೂ ಉಳಿದಿಲ್ಲ ವಂಶಾಡಳಿತ, ದುರಾಡಳಿತ, ಭ್ರಷ್ಟಾಚರದಿಂದ ಜನರಿಂದಲೇ ನಾಶವಾಗಿದ್ದೀರಾ, ಮತ್ತೆ ಸರ್ವನಾಶವಾಗ್ತೀರಾ, ಯಾವ ರಾಜ್ಯದಲ್ಲೂ ಕಾಂಗ್ರೆಸ್ ಅಸ್ತಿತ್ವ ಉಳಿಯಲ್ಲ ಚುನಾವಣೆ ಸಂದರ್ಭದಲ್ಲಿ ರಾಹುಲ್ ಗಾಂಧಿ ನಾನಾ ರೀತಿಯ ನಾಟಕವಾಡ್ತಾರೆ ಪಾರ್ಲಿಮೆಂಟ್ ಚುನಾವಣೆ ನಡೆದಾಗ ವಿದೇಶಕ್ಕೆ ಓಡಿ ಹೋಗ್ತಾರೆ. ಈಗ ಚುನಾವಣೆಗಾಗಿ ನೀರಿಗಿಳಿಯೋದು, ಹಾಡೋದು, ಡ್ಯಾನ್ಸ್ ಮಾಡ್ತಿದ್ದಾರೆ ಎಂದು ಶೋಭಾ ಹೇಳಿದ್ದಾರೆ. ಇದೇ ವೇಳೆ ಮಾತನಾಡಿದ ಅವರು ಕರ್ನಾಟಕದಲ್ಲಿ ಕನ್ನಡಿಗರು ಹಾಗೂ ಮರಾಠಿಗರು ಅನ್ಯೋನ್ಯವಾಗಿ ಬದುಕುತ್ತಿದ್ದೇವೆ. ಅನಾವಶ್ಯಕವಾಗಿ ಎಂ.ಇ.ಎಸ್ ಹಾಗೂ ಮಹಾರಾಷ್ಟçದ ಸರ್ಕಾರರ ಗೊಂದಲ ಸೃಷ್ಠಿಸುವ ಕೆಲಸ ಮಾಡುತ್ತಿದೆ. ಕರ್ನಾಟಕ ರಾಜ್ಯ ಸರ್ಕಾರ ನೀಡುತ್ತಿರುವ ಎಲ್ಲಾ ಯೋಜನೆಗಳು ಕರ್ನಾಟಕದಲ್ಲಿರುವ ಎಲ್ಲಾ ಮರಾಠಿಗರ ಮನೆಗೂ ತಲುಪಿವೆ. ಕರ್ನಾಟಕ ಮತ್ತು ಮಹಾರಾಷ್ಟç ಯಾವುದೋ ದೂರದ ಪಾಕಿಸ್ಥಾನ ಮತ್ತು ಭಾರತವಲ್ಲ. ಎರಡು ರಾಜ್ಯಗಳು ಭಾರತದ ಅಂಗಗಳಾಗಿದ್ದು ಸೌಹಾರ್ದತೆಯಿಂದ ಇರುವುದನ್ನು ಕಲಿತುಕೊಳ್ಳಬೇಕೆಂದು ಹೇಳಿದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!