May 4, 2024

MALNAD TV

HEART OF COFFEE CITY

ಮಲೆನಾಡಲ್ಲಿ ಮತ್ತೆ ಮಳೆ, ಕಂಗಾಲಾದ ಬೆಳೆಗಾರರು

1 min read

 

ಚಿಕ್ಕಮಗಳೂರು : ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಳೆದ ನಾಲ್ಕೈದು ದಿನಗಳಿಂದ ಸಂಪೂರ್ಣ ಬಿಡುವು ನೀಡಿದ್ದ ವರುಣದೇವ ಇಂದು ಮತ್ತೆ ಅಬ್ಬರಿಸಿ ಬೊಬ್ಬರಿದಿದ್ದಾನೆ. ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸುತ್ತಮುತ್ತ ಸುಮಾರು ಎರಡು ಗಂಟೆಗೂ ಹೆಚ್ಚು ಹೊತ್ತು ಭಾರೀ ಮಳೆ ಸುರಿದಿದೆ. ಏಕಾಏಕಿ ಶುರುವಾದ ಮಳೆ ಜನಜೀವನವನ್ನ ಹೈರಾಣಾಗುವಂತೆ ಮಾಡಿದೆ.

ಮಳೆ ನೀರು ರಸ್ತೆಯಲ್ಲಿ ನದಿಯಂತೆ ಹರಿದಿದ್ದರಿಂದ ವಾಹನ ಸವಾರರು ಪರದಾಟ ನಡೆಸಿದ್ದಾರೆ. ಕಳೆದ ಎರಡು ತಿಂಗಳಿಂದ ನಿರಂತರವಾಗಿ ಮಳೆ ಸುರಿದ ಪರಿಣಾಮ ಅಡಿಕೆ-ಕಾಫಿ-ಮೆಣಸು ಬೆಳೆಗಾರರು ಬೆಳೆಯನ್ನ ಒಣಗಿಸಲಾಗದೆ ಕಂಗಾಲಾಗಿದ್ದರು. ಕಳೆದ ನಾಲ್ಕೈದು ದಿನದಿಂದ ಮಳೆ ಬಿಡುವು ನೀಡಿದ್ದ ಪರಿಣಾಮ ಬೆಳೆಗಾರರು ಬೆಳೆಯನ್ನ ಒಣಗಿಸೋದಕ್ಕೆ ಮುಂದಾಗಿದ್ದರು. ಆದರೀಗ, ಮತ್ತೆ ಏಕಾಏಕಿ ಆರಂಭವಾದ ಮಳೆ ಧಾರಾಕಾರವಾಗಿ ಸುರಿದಿ ಪರಿಣಾಮ ಅಂಗಳದಲ್ಲಿದ್ದ ಬೆಳೆ ಮೇಲೆ ಮತ್ತೆ ನೀರು ನುಗ್ಗಿದ್ದು ಬೆಳೆಗಾರರು ಮತ್ತೆ ಆತಂಕಕ್ಕೀಡಾಗಿದ್ದಾರೆ. ಈ ಬಾರಿ ಕಾಫಿಗೆ ಉತ್ತಮ ಬೆಲೆ ಇದೆ. ಆದರೆ, ಬೆಳೆ ಇಲ್ಲ. ಇರೋ ಬೆಳೆಯನ್ನ ಬೆಳೆಗಾರರು ಹೋರಾಡಿ ಉಳಿಸಿಕೊಳ್ಳುತ್ತಿದ್ದಾರೆ. ಈಗ ಮತ್ತೆ ಮಳೆ ಆರಂಭವಾಗಿದ್ದು ಇರೋ ಬೆಳೆಗೂ ಮಳೆರಾಯ ಮಗ್ಗಲ ಮುಳ್ಳಾಗುತ್ತಾನಾ ಎಂದು ಬೆಳೆಗಾರರು ಆತಂಕಕ್ಕೀಡಾಗಿದ್ದಾರೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!