May 2, 2024

MALNAD TV

HEART OF COFFEE CITY

ಕಾಫಿನಾಡಲ್ಲಿ ಮುಂದುವರೆದ ಮಳೆ ಆರ್ಭಟ-ಹೊನ್ನಾಳ ಚೆಕ್ ಪೋಸ್ಟ್ ಬಳಿ ರಸ್ತೆ ಬಿರುಕು

1 min read

ಚಿಕ್ಕಮಗಳೂರು…: ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಳೆದ‌ ಎರಡು ದಿನಗಳಿಂದ ಮಳೆಯ ಆರ್ಭಟ ಜೋರಾಗಿದೆ. ಜಿಲ್ಲೆಯಲ್ಲಿ ನಿನ್ನೆಯಿಂದ ಬಿಟ್ಟು ಬಿಡದೇ ಸುರಿಯುತ್ತಿರುವ ಧಾರಾಕಾರ ಮಳೆಗೆ ಚಿಕ್ಕಮಗಳೂರಿನಿಂದ ಮುತ್ತೋಡಿಗೆ ಸಂಪರ್ಕ ಕಲ್ಪಿಸುವ ರಸ್ತೆಯ ಹೊನ್ನಾಳ ಚೆಕ್ ಪೋಸ್ಟ್ ಬಳಿ ರಸ್ತೆ ಬಿರುಕು ಕಾಣಿಸಿಕೊಂಡಿದೆ. ರಸ್ತೆಯಲ್ಲಿ ಬಿರುಕು ಕಾಣಿಸಿಕೊಂಡ ಹಿನ್ನೆಲೆ ಈ ಮಾರ್ಗದಲ್ಲಿ ಸಂಚಾರ ಸ್ಥಗಿತ ಮಾಡಲಾಗಿದೆ.

ಜಿಲ್ಲೆಯಲ್ಲಿ ತುಂಗಾ-ಭದ್ರಾ, ಹೇಮಾವತಿ ನದಿಗಳ ನೀರಿನ ಹರಿವು ಹೆಚ್ಚಾಗಿದ್ದು. ರಾಜ್ಯ ಹೆದ್ದಾರಿ ಹಾದು ಹೋಗುವ ಕಳಸ ತಾಲೂಕಿನ ಕಳಸ-ಹೊರನಾಡು ಸಂಪರ್ಕಿಸುವ ಹೆಬ್ಬಾಳೆ ಸೇತುವೆಗೆ ಮುಳುಗಡೆಯಾಗವ ಭೀತಿ ಹೆಚ್ಚಾಗಿದೆ. ಅಲ್ಲದೆ ನಿನ್ನೆಯಿಂದ ಬಿಟ್ಟು ಬಿಡದೇ ಸುರಿಯುತ್ತಿರುವ ಧಾರಾಕಾರ ಮಳೆಗೆ ಜಿಲ್ಲೆಯ ಕಳಸ, ಕುದುರೆಮುಖ, ಕೊಟ್ಟಿಗೆಹಾರ, ಚಾರ್ಮಾಡಿ ಘಾಟಿ ಹಾಗೂ ಶೃಂಗೇರಿಯಲ್ಲಿ ಭಾರೀ ಮಳೆಗಿದೆ. ಜಿಲ್ಲೆಯಲ್ಲಿ ಭಾರಿ ಮಳೆಯಿಂದ ಮಲೆನಾಡಿನ ಜನರ ಜನ ಜೀವನ ಅಸ್ತವ್ಯಸ್ತವಾಗಿದೆ.ಚಿಕ್ಕಮಗಳೂರು ಜಿಲ್ಲೆ ಸೇರಿದಂತೆ ಮಲೆನಾಡು ಭಾಗದಲ್ಲಿ ಮುಂದಿನ ಜುಲೈ 18 ರವೆಗೆ ಭಾರೀ ಮಳೆಯಾಗುವ ಮುನ್ಸೂಚನೆ ಇದ್ದು ಹವಾಮಾನ ಇಲಾಖೆಯಿಂದ ಎಲ್ಲೋ ಅಲರ್ಟ್ ಘೋಷಣೆ ಮಾಡಿದೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!