May 20, 2024

MALNAD TV

HEART OF COFFEE CITY

ಪ್ರತಿಷ್ಟಿತರ ಅಂದ ಕಾನೂನು ಅಮಾಯಕ ಜೀವ ಬಲಿ, ವ್ಯಾಪಕ ಟೀಕೆ

1 min read

 

ಚಿಕ್ಕಮಗಳೂರು; ನಗರದ ಎನ್ ಎಂ ಸಿ ವೃತ್ತದಲ್ಲಿ ಸರಿಣಿ ಅಪಘಾತ ನಡೆದಿದ್ದು ಪಾದಾಚಾರಿ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ನಡೆದಿದೆ.

 

ವೇಗವಾಗಿ ಬಂದ ಟಿಪ್ಪರ್ ಲಾರಿ ರಬಸಕ್ಕೆ ಟಾಟಾ ಪಿಕಪ್ ವಾಹನ ಮತ್ತೊಂದು ಬೈಕ್ ಗೆ ಢಿಕ್ಕಿ ಹೊಡೆದಿದ್ದು ಅಲ್ಲದೇ ಪಾದಾಚಾರಿ ಮೇಲೆ ಎರಗಿದ್ದು ಪಾದಾಚಾರಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.

 

ಮೃತ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ ಸ್ಥಳಕ್ಕೆ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ವ್ಯಕ್ತಿಯನ್ನು ಶವಾಗಾರಕ್ಕೆ ಸಾಗಿಸಿದ್ದಾರೆ. ಇನ್ನು ಪಿಕಪ್ ವಾಹನ ಚಾಲಕನಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಎರಡು ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ.

 

 

ನಗರದ ಪ್ರತಿಷ್ಟಿತ ಸಿಎಸ್ ಸಿ ಕಂಪನಿಗೆ ಸೇರಿದ ಲಾರಿ ಇದಾಗಿದ್ದು ಸ್ಪಷ್ಟವಾಗಿ ನಗರ ಪ್ರದೇಶದಲ್ಲಿ ಬಾರೀ ವಾಹನಗಳ ಸಂಚಾರ ನಿಷೇಧವಿದ್ದರೂ ಪೊಲೀಸರ ಕಣ್ಣೇದುರೇ ನಿತ್ಯ ನೂರಾರು ಲಾರಿಗಳು ಸಂಚರಿಸುತ್ತಿದ್ದು ಹಲವು ಈ ರೀತಿಯ ಪ್ರಕರಣಗಳು ನಡೆದರೂ ಆಡಳಿತ ವರ್ಗ ಜಾಣಕುರುಡು ಪ್ರದರ್ಶಿಸುತ್ತಿದೆ ಎಂದು ಸಾರ್ವಜನಿಕರು ಆರೋಪಿಸಿದ್ದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!