May 6, 2024

MALNAD TV

HEART OF COFFEE CITY

ಅಕಾಲಿಕ ಮಳೆಯಿಂದ ಬೆಳೆಗಾರರಿಗೆ ಉಂಟಾಗಿರುವ ನಷ್ಟದ ಬಗ್ಗೆ ಸಮಿಕ್ಷೆಗೆ ಆಗ್ರಹ

1 min read

ಚಿಕ್ಕಮಗಳೂರು : ಅತಿವೃಷ್ಠಿ, ಅನಾವೃಷಿ, ಭೂಕುಸಿತ, ಅಕಾಲಿಕ ಮಳೆ ಹಾಗೂ ಕಾಡು ಪ್ರಾಣಿಗಳ ಹಾವಳಿಯಂತಹ ಸಮಸ್ಯೆಗಳಿಂದ ಬಳಲುತ್ತಿರುವ ತೋಟದ ಮಾಲೀಕರಿಗೆ ಶೇಕಡಾ 3 ರ ಬಡ್ಡಿ ದರದಲ್ಲಿ ಸಾಲ ವಿತರಣೆ ಮಾಡಬೇಕು ಎಂದು ಕಾಫಿ ಬೆಳೆಗಾರರ ಸಂಘದ ಮಾಜಿ ಅಧ್ಯಕ್ಷ ಜೆ.ಎಸ್ ಜಯರಾಮ್ ರವರು ಆಗ್ರಹಿಸಿದರು.

          ಅವರು ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತ, ಕೇರಳ ಮಾದರಿಯಲ್ಲಿ ಕಾಫಿ ಬೆಳೆಗಾರರಿಗೆ ಬೆಂಬಲ ಬೆಲೆ ನೀಡಬೇಕು. ಬಳಲುತ್ತಿರುವ ತೋಟದ ಮಾಲೀಕರಿಗೆ ಶೇಕಡಾ 3 ರ ಬಡ್ಡಿ ದರದಲ್ಲಿ ಸಾಲ ವಿತರಣೆ ಮಾಡಬೇಕು ಎಂದು ಆಗ್ರಹಿಸಿದರು. ಕಳೆದ ಆರು ವರ್ಷಗಳಿಂದ ಕಂಡು ಕೇಳರಿಯದ ರೀತಿಯಲ್ಲಿ ಪ್ರಕೃತಿ ವೈಪರಿತ್ಯಕ್ಕೆ ಕಾಫಿ ಬೆಳೆಗಾರರು ಸಿಲುಕುತ್ತಿದ್ದಾರೆ. ಈ ಬಾರಿ ಸುರಿದ ಅಕಾಲಿಕ ಮಳೆಯ ಜೊತೆಗೆ ದೊಡ್ಡ ಗಾತ್ರದ ಮಂಜುಗೆಡ್ಡಗಳು ಬಿದ್ದಿದ್ದು ಇದರಿಂದ ಕಾಫಿ ಬೆಳೆಗಾರರು ತೀವ್ರ ಸಂಕಷ್ಠಕ್ಕೆ ಸಿಲುಕಿದ್ದಾರೆ. ಕೂಡಲೇ ಕಾಫಿ ಮಂಡಳಿ ಸಮೀಕ್ಷೆ ನಡೆಸಿ ಸೂಕ್ತ ಪರಿಹಾರಕ್ಕೆ ಕೇಂದ್ರ ಸರ್ಕಾರಕ್ಕೆ ವರದಿ ನೀಡಬೇಕು ಎಂದು ಒತ್ತಾಯಿಸಿದರು.     

ಸುದ್ದಿಗೋಷ್ಠಿಯಲ್ಲಿ ಮನೋಹರ್, ವಸ್ತಾರೆ ಬೆಳೆಗಾರರ ಸಂಘದ ಅಧ್ಯಕ್ಷ ಮಲ್ಲೇಶ್, ಮಾಜಿ ಎಂಎಲ್‌ಎ ಐ.ಬಿ ಶಂಕರ್, ಗೋಣಿಬೀಡು ಹೋಬಳಿ ಅಧ್ಯಕ್ಷ ರೋಷನ್ ಬೇಗ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!