ಸಿ.ಟಿ.ರವಿಗೆ ಗಣೇಶನ ಮೂರ್ತಿ ನೀಡಿ ಗಣಪತಿ ಹಬ್ಬಕ್ಕೆ ಅನುಮತಿ ಕೋರಿಕೆ
1 min readಚಿಕ್ಕಮಗಳೂರು.ಗಣೇಷ ಚತುರ್ಥಿಗೆ ವಿಧಿಸಿರುವ ಕೋವಿಡ್ ನಿರ್ಬಂಧಗಳನ್ನ ಸಡಿಲಗೊಳಿಸುವಂತೆ ಆಗ್ರಹಿಸಿ ನಗರದಲ್ಲಿ ಶ್ರೀರಾಮಸೇನೆ ಕಾರ್ಯಕರ್ತರು ಶಾಸಕ ಸಿ.ಟಿ.ರವಿ ಅವರಿಗೆ ವಿಭಿನ್ನವಾಗಿ ಮನವಿ ಮಾಡಿದ್ದಾರೆ.
ನಗರದ ಬಸವನಹಳ್ಳಿಯಲ್ಲಿರುವ ಶಾಸಕ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಮನೆಗೆ ಭೇಟಿ ನೀಡಿದ ಶ್ರೀರಾಮಸೇನೆ ಕಾರ್ಯಕರ್ತರು ಗಣೇಶನ ಮೂರ್ತಿ ನೀಡಿ ಮನವಿ ಮಾಡಿದ್ದಾರೆ. ಗಣೇಶ ಚತುರ್ಥಿ ಸಂಬಂಧಗಳನ್ನ ಬೆಸೆಯುವ ಹಬ್ಬ. ಹಬ್ಬದ ಮೇಲೆ ನಾನಾ ವರ್ಗದ ಜನ ನಾನಾ ರೀತಿ ಅವಲಂಬಿತರಾಗಿದ್ದಾರೆ. ಹಾಗಾಗಿ, ಹಬ್ಬಕ್ಕೆ ನಿರ್ಬಂಧ ಹೇರುವುದರಿಂದ ಜನಸಾಮಾನ್ಯರಿಗೂ ತೊಂದರೆಯಾಗಲಿದೆ. ಹಾಗಾಗಿ, ಗಣೇಶ ಚತುರ್ಥಿಗೆ ವಿಧಿಸಿರುವ ಕೋವಿಡ್ ನಿರ್ಬಂಧಗಳನ್ನ ಸಡಿಲಗೊಳಿಸುವಂತೆ ಮನವಿ ಮಾಡಿದ್ದಾರೆ. ಕೋವಿಡ್ ಹೆಚ್ಚುವ ಭೀತಿ ಇರುವುದರಿಂದ ಎಲ್ಲಾ ಗಣಪತಿ ಮಂಡಳಿಗೂ ಕೋವಿಡ್ ನಿಯಮ ಪಾಲಿಸಲು ಸುತ್ತೋಲೆ ಹೊರಡಿಸುವಂತೆ ಮನವಿ ಮಾಡಿದ್ದಾರೆ. ಮೂರ್ತಿ ತಯಾರಕರು, ವಾದ್ಯವೃಂದ, ಶಾಮಿಯಾನ ಹಾಗೂ ವಿವಿಧ ವರ್ಗದ ವ್ಯಾಪಾರಸ್ಥರನ್ನ ಪರಿಗಣನೆಗೆ ತೆಗೆದುಕೊಂಡು ಸಾರ್ವಜನಿಕ ಗಣೇಶೋತ್ಸವಕ್ಕೆ ಅನುಮತಿ ನೀಡಬೇಕೆಂದು ಮನವಿ ಮಾಡಿದ್ದಾರೆ. ಗಣೇಶ ಚತುರ್ಥಿಗೆ ಅವಕಾಶ ನೀಡಿ ಸೂಕ್ತ ರೀತಿಯ ಅಧಿಸೂಚನೆಯನ್ನೂ ಹೊರಡಿಸುವಂತೆ ಮನವಿ ಮಾಡಿದ್ದಾರೆ. ಶ್ರೀರಾಮಸೇನೆ ಕಾರ್ಯಕರ್ತರು ಸಿ.ಟಿ.ರವಿ ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಸಿ.ಟಿ.ರವಿ ಇರದ ಕಾರಣ ಅವರ ಅನುಪಸ್ಥಿತಿಯಲ್ಲಿ ಸಿ.ಟಿ.ರವಿ ಪತ್ನಿ ಪಲ್ಲವಿ ಸಿ.ಟಿ.ರವಿ ಮನವಿಯನ್ನ ಸ್ವೀಕರಿಸಿದರು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g