ಬೇರೆ ಇಲಾಖೆಯವರನ್ನು ತಹಸೀಲ್ದಾರ್ ಮಾಡಿರುವುದಕ್ಕೆ ಆಕ್ಷೇಪ : ಕಂದಾಯ ನೌಕರರ ಪ್ರತಿಭಟನೆ
1 min readಚಿಕ್ಕಮಗಳೂರು: ಮಾತೃ ಇಲಾಖೆಯಾದ ಕಂದಾಯ ಇಲಾಖೆಯ ನೌಕರರನ್ನು ಹೊರತುಪಡಿಸಿ ಬೇರೆ ಇಲಾಖೆಯವರನ್ನು ತಹಸೀಲ್ದಾರ್ ಆಗಿ ನೇಮಕ ಮಾಡಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿ ಕಂದಾಯ ಇಲಾಖೆ ನೌಕರರು ಇಂದು ಜಿಲ್ಲಾಧಿಕಾರಿಗಳ ಕಛೇರಿ ಎದುರು ಪ್ರತಿಭಟನೆ ನಡೆಸಿದ್ದಾರೆ.
ಇಲಾಖೆಯಿಂದ ಬಂದು ತಹಸೀಲ್ದಾರ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವವರನ್ನು ತಕ್ಷಣ ಮಾತೃ ಇಲಾಖೆಗೆ ವರ್ಗಾಯಿಸುವಂತೆ ಒತ್ತಾಯಿಸಿದರು. ಅಲ್ಲದೆ ಕಂದಾಯ ಇಲಾಖೆಯಲ್ಲಿಯೇ ಕೆಳಹಂತದಿಂದ ಉಪ ತಹಸೀಲ್ದಾರ್ ವರೆಗೂ ಸಾಕಷ್ಟು ನೌಕರರು ಇದ್ದು ಬಡ್ತಿಯಿಂದ ವಂಚಿತರಾಗಿದ್ದಾರೆ. ಸಚಿವಾಲಯದ ಅಧಿಕಾರಿಗಳು ಸೇರಿದಂತೆ ಬೇರೆ ಇಲಾಖೆಯ ಅಧಿಕಾರಿಗಳು ತಹಶೀಲ್ದಾರ್ ಆಗಿ ನೇಮಕವಾಗುವುದನ್ನು ವಿರೋಧಿಸಿ ಸಚಿವ ಸಂಪುಟ ತೆಗೆದುಕೊಂಡ ತೀರ್ಮಾನಕ್ಕೆ ನೌಕರರು ಸ್ವಾಗತಿಸಿದ್ದಾರೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://www.youtube.com/channel/UCmBISI2sn_0gamb44UFj-vQ
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g