May 15, 2024

MALNAD TV

HEART OF COFFEE CITY

ಕಂದಾಯ ನಿರೀಕ್ಷಕ ಲಕ್ಷ್ಮಣ್ ಬಂಧನ

1 min read

ಸಾಗುವಳಿ ಚೀಟಿ ಇರುವ ಯಾರದ್ದೋ ಹೆಸರಿನ ಸಾಗುವಳಿ ಚೀಟಿ ನಂಬರ್ ಬಳಸಿ ಅದೇ ಸಂಖ್ಯೆಯಲ್ಲಿ ಮತ್ತೊಬ್ಬರಿಗೆ ಜಮೀನು ಖಾತೆ ಮಾಡಿಕೊಟ್ಟ ಆರೋಪ ಸಂಬಂಧಿಸಿದಂತೆ ರಾಜಸ್ವ ನಿರೀಕ್ಷನನ್ನ ಪೊಲೀಸರು ಬಂಧಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಗೋಣಿಬೀಡು ಹೋಬಳಿಯಲ್ಲಿ ನಡೆದಿದೆ. ಲಕ್ಷ್ಮಣ್ ಬಂಧಿತ ರೆವಿನ್ಯೂ ಇನ್ಸ್‍ಪೆಕ್ಟರ್. ಕಳೆದ ಎರಡು ವರ್ಷದಿಂದ ಮೂಡಿಗೆರೆ ತಾಲೂಕಿನ ಗೋಣಿಬೀಡು ಹೋಬಳಿಯಲ್ಲಿ ಆರ್.ಐ. ಆಗಿರುವ ಲಕ್ಷ್ಮಣ್ ಹೊಸಪುರ ಗ್ರಾಮದ ನೀಲಯ್ಯ ಪೂಜಾರಿ ಅವರಿಗೆ ಸೇರಿದ ಸಾಗುವಳಿ ಚೀಟಿ ಸಂಖ್ಯೆ 666/12-13ನ್ನ ಬಳಸಿ ಅಭಿಷೇಕ್ ಬಿನ್ ಮಂಜುನಾಥ್ ಎಂಬುವವರಿಗೆ ಅಕ್ರಮವಾಗಿ ಹೊಸಪುರ ಗ್ರಾಮದ ಸರ್ವೇ ನಂಬರ್ 73ರಲ್ಲಿ 25 ಗುಂಟೆ ಜಮೀನನ್ನ ಅಕ್ರಮವಾಗಿ ಖಾತೆ ಮಾಡಿ ಅನುಮೋದನೆ ಮಾಡಿರುವ ಆರೋಪವಿದೆ. ಅಭಿಷೇಕ್ ಬಿನ್ ಮಂಜುನಾಥ್ ಅವರ ಫಾರಂ ನಂಬರ್ 94ರ ಅಡಿ ಅರ್ಜಿ ಸಲ್ಲಿಸದೆ ಇದ್ದರೂ ಕೂಡ ರಾಜಸ್ವ ನಿರೀಕ್ಷಕ ಲಕ್ಷ್ಮಣ್ ನಿಯಮ ಬಾಹಿರವಾಗಿ ದಾಖಲೆ ಸೃಷ್ಟಿಸಿ ಬಗರ್ ಹುಕುಂ ಸಮಿತಿಯ ಮುಂದೆ ಮಂಡಿಸಿದ್ದಾರೆ. 2021 ರ ಜೂನ್ 2ರಂದು ಜಮೀನಿನ ಖಾತೆಯನ್ನು ಅಭಿಷೇಕ್ ಬಿನ್ ಮಂಜುನಾಥ್ ರವರಿಗೆ ಅಕ್ರಮವಾಗಿ ಖಾತೆಗೆ ಅನುಮೋದಿಸಿದ್ದಾರೆ ಎಂದು ನೀಲಯ್ಯಪೂಜಾರಿ ಜಿಲ್ಲಾಧಿಕಾರಿಗೆ ದೂರು ನೀಡಿದ್ದರು.

ದೂರು ಸ್ವಿಕರಿಸಿದ ಜಿಲ್ಲಾಧಿಕಾರಿ ಮೂಡಿಗೆರೆ ತಹಸೀಲ್ದಾರ್‍ಗೆ ತನಿಖೆ ನಡೆಸಿ ವರದಿ ನೀಡುವಂತೆ ಸೂಚಿಸಿದ್ದರು. ತನಿಖೆಯಲ್ಲಿ ಅಕ್ರಮ ಖಾತೆ ಮಾಡಿರುವುದು ದೃಢಪಟ್ಟಿದ್ದು, ಜಿಲ್ಲಾಧಿಕಾರಿ ಮಾರ್ಗದರ್ಶನದಲ್ಲಿ ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎ ಮತ್ತು ಬಿ ಕಂದಾಯ ಆಕ್ಟ್ ಪ್ರಕಾರ ಪ್ರಕರಣ ದಾಖಲಿಸಿ ರಾಜಸ್ವ ನಿರೀಕ್ಷಕ ಲಕ್ಷ್ಮಣ್ ನನ್ನು ವಶಕ್ಕೆ ತೆಗೆದುಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!