ಶೃಂಗೇರಿ ಮಠಕ್ಕೆ ಆರ್.ಎಸ್.ಎಸ್. ಮುಖ್ಯಸ್ಥ ಮೋಹನ್ ಭಾಗವತ್ ಭೇಟಿ..!
1 min readಚಿಕ್ಕಮಗಳೂರು : ಜಿಲ್ಲೆಯ ಶೃಂಗೇರಿ ಮಠಕ್ಕೆ ಆರ್.ಎಸ್.ಎಸ್. ಮುಖ್ಯಸ್ಥ ಮೋಹನ್ ಭಾಗವತ್ ಭೇಟಿ ನೀಡಿ ಹಿರಿಯ ಗುರು ಭಾರತೀತೀರ್ಥ ಶ್ರೀಗಳು ಹಾಗೂ ಕಿರಿಯ ಗುರು ವಿಧುಶೇಖರ ಶ್ರೀಗಳ ಜೊತೆ ಆಶೀರ್ವಾದ ಪಡೆದು, ಶಾರದಾಂಭೆಯ ದರ್ಶನ ಪಡೆದರು.
ಗುರುವತ್ರಯರ ಆಶೀರ್ವಾದ ಪಡೆದ ಮೋಹನ್ ಭಾಗವತ್ ಒಂದುದೂವರೆ ಗಂಟೆಗಳ ಕಾಲ ಗುರುಗಳ ಜೊತೆ ಚರ್ಚೆ ಮಾಡಿದ್ದಾರೆ. ಅಷ್ಟೇ ಅಲ್ಲದೆ ರಾಮ ಮಂದಿರ ಉದ್ಘಾಟನೆ ಇನ್ನೇನು ಕೆಲವೇ ತಿಂಗಳು ಮಾತ್ರ ಬಾಕಿ ಇರುವುದರಿಂದ, ರಾಮ ಮಂದಿರ ಉದ್ಘಾಟನೆಗೆ ಆಹ್ವಾನ ನೀಡಲು ಬಂದಿರಬಹುದು ಎಂದು ಶಂಕಿಸಲಾಗಿದೆ …? ನಂತರ ಹಿರಿಯ ಗುರು ಭಾರತೀತೀರ್ಥ ಶ್ರೀಗಳು ಹಾಗೂ ಕಿರಿಯ ಗುರು ವಿಧುಶೇಖರ ಶ್ರೀಗಳ ಜೊತೆ ಮಾತನಾಡಿ, ಆಶೀರ್ವಾದ ಪಡೆದು ಅಲ್ಲಿಂದ ಹೊರಟಿದ್ದಾರೆ. ಈ ಸಂದರ್ಭಲ್ಲಿ ಮೋಹನ್ ಭಾಗವತ್ ಜೊತೆ ರಾಜ್ಯ ಮಟ್ಟದ ಐವರು ಆರ್.ಎಸ್.ಎಸ್.ಸದಸ್ಯರು ಕೂಡ ಭಾಗಿಯಾಗಿರುವುದು ಹಲವು ಪ್ರಶ್ನೆಗಳನ್ನು ಸಹ ಹುಟ್ಟು ಹಾಕಿದೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g