ಎಸ್.ಪಿ. ಅಕ್ಷಯ್ರವರಿಗೆ ಹೃದಯ ಸ್ಪರ್ಶಿ ಬಿಳ್ಕೊಡುಗೆ
1 min readಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆಯಿಂದ ವರ್ಗಾವಣೆಗೊಂಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಪೊಲೀಸ್ ಸಿಬ್ಬಂದಿಗಳು ಆತ್ಮೀಯವಾದ ಹೃದಯಸ್ಪರ್ಶಿ ಬಿಳ್ಕೊಡುಗೆಯನ್ನು ಡಿ.ಆರ್. ಮೈದಾನದಲ್ಲಿ ನೀಡಿದರು.
ಚಿಕ್ಕಮಗಳೂರು ಜಿಲ್ಲೆಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾಗಿ ಅಧಿಕಾರ ಸ್ವೀಕರಿಸಿದ ಎಂ.ಹೆಚ್ ಅಕ್ಷಯ್ ಜಿಲ್ಲೆಯಲ್ಲಿ ಉತ್ತಮ ಸೇವೆ ಸಲ್ಲಿಸಿದ್ದರು. ಇವರನ್ನು ಇತ್ತಿಚೆಗೆ ಸರ್ಕಾರ ಬೇರೆಡೆಗೆ ವರ್ಗಾವಣೆಗೊಳಿಸಿತ್ತು.
ಮರ್ಗಾವಣೆಗೊಂಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಹೆಚ್. ಅಕ್ಷಯ್ರವರಿಗೆ ಬಿಳ್ಕೊಡುಗೆ ಕಾರ್ಯಕ್ರಮನ್ನು ಪೊಲೀಸರು ಡಿ.ಆರ್ ಮೈದಾನದಲ್ಲಿ ಹಮ್ಮಿಕೊಂಡಿದ್ದರು. ಈ ವೇಳೆ ತೆರೆದ ವಾಹನದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನು ನಿಲ್ಲಿಸಿ ಅವರ ಮೇಲೆ ಹೂಮಳೆ ಸುರಿಸಿ ಅಭಿಮಾನ ಮೆರೆದರು. ತಮ್ಮ ಸಹ ಸಿಬ್ಬಂದಿಗಳ ಹೃದಯಸ್ಪರ್ಶಿ ಬಿಳ್ಕೊಡುಗೆಯಿಂದ ಎಸ್.ಪಿ. ಅಕ್ಷಯ್ ಭಾವುಕರಾದರು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g