May 10, 2024

MALNAD TV

HEART OF COFFEE CITY

ತಳಿಹಳ್ಳ ಗ್ರಾ.ಪಂ ಅಧ್ಯಕ್ಷರಾಗಿ ಸದಾಶಿವ ಉಪಾಧ್ಯಕ್ಷರಾಗಿ ಶಾಂತ ಅವಿರೋಧ ಆಯ್ಕೆ

1 min read

ಚಿಕ್ಕಮಗಳೂರು-ತಾಲ್ಲೂಕಿನ ತಳಿಹಳ್ಳ ಗ್ರಾಮಪಂಚಾಯಿತಿ ಅಧ್ಯಕ್ಷರಾಗಿ ಸಿ.ಎಂ.ಸದಾಶಿವ, ಉಪಾಧ್ಯಕ್ಷರಾಗಿ ಶಾಂತಹೇಮಂತ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆಂದು ಚುನಾವಣಾ ಅಧಿಕಾರಿ ರಾಮನಗೌಡ ಪಾಟೀಲ್ ತಿಳಿಸಿದರು.ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷ ಸಿ.ಎಂ ಸದಾಶಿವ ಮಾತನಾಡಿ ಕಾಂಗ್ರೆಸ್ ಸರ್ಕಾರ ಚುನಾವಣಾ ಪೂರ್ವದಲ್ಲಿ ಘೋಷಿಸಿದ್ದ 5 ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನ ಮಾಡುತ್ತಿದ್ದು, ಉಚಿತ ಅಕ್ಕಿ, ಗೃಹ ಜ್ಯೋತಿ, ಗೃಹ ಲಕ್ಷ್ಮಿ, ಶಕ್ತಿ ಯೋಜನೆ ಜನಪರ ಕಾರ್ಯಕ್ರಮಗಳನ್ನು ಜಾರಿ ಮಾಡಿದ್ದರು. ವಿಪಕ್ಷಗಳು ಟೀಕೆ ಮಾಡುತ್ತಿರುವುದನ್ನು ಖಂಡಿಸಿದರು.
ಸದನದಲ್ಲಿ ಚರ್ಚೆ ಆಗಿರುವಂತೆ ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಂದು ಉತ್ತಮ ದರ್ಜೆಯ ಸರ್ಕಾರಿ ಶಾಲೆ ನೀಡಲು ಉದ್ದೇಶಿಸಿದ್ದು, ಶಿಕ್ಷಣ ಮತ್ತು ಆರೋಗ್ಯಕ್ಕೆ ಮೊದಲ ಆದ್ಯತೆ ನೀಡುವಂತೆ ಪಂಚಾಯಿತಿ ಸಭೆಯಲ್ಲಿ ನಿರ್ಣಯ ಮಾಡಿ ಸರ್ಕಾರಕ್ಕೆ ಕಳುಹಿಸುವುದಾಗಿ ಭರವಸೆ ನೀಡಿದರು.
ಎಲ್ಲಾ ಗ್ರಾಮಗಳಿಗೂ ಮೂಲಭೂತ ಸೌಕರ್ಯ ಕಲ್ಪಿಸುವುದರ ಜೊತೆಗೆ ಅಭಿವೃದ್ಧಿಗೆ ಆದ್ಯತೆ ನೀಡುತ್ತೇನೆ, ಸರ್ಕಾರದ ಜನಪರ ಯೋಜನೆಗಳನ್ನು ಸಮಾಜದ ಕಟ್ಟ ಕಡೆಯ ವ್ಯಕ್ತಿಗೆ ತಲುಪಿಸುವಲ್ಲಿ ಸದಸ್ಯರ ವಿಶ್ವಾಸದೊಂದಿಗೆ ಶ್ರಮಿಸುವುದಾಗಿ ತಿಳಿಸಿದರು.

ಮಲೆನಾಡು ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ, ರಸ್ತೆ ದುರಸ್ಥಿ ಕಾಮಗಾರಿಗಳನ್ನು ನಡೆಸಲು ಸರ್ಕಾರ ಮತ್ತು ಶಾಸಕರು ಕೈಜೋಡಿಸಿದ್ದಾರೆ, ತಮ್ಮದು ರಾಜಕೀಯ ಕುಟುಂಬವಾಗಿರುವುದರಿಂದ ಪಂಚಾಯಿತಿ ರಾಜಕಾರಣದ ಬಗ್ಗೆ ಹೆಚ್ಚು ಅನುಭವವಿದ್ದು, ಹೊಸ ಗ್ರಾ.ಪಂ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಗ್ರಾಮಗಳ ಅಭಿವೃದ್ಧಿಗೆ ಒತ್ತು ನೀಡುವುದಾಗಿ ಹೇಳಿದರು.
ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳ ಬಡವರಿಗೆ ಮನೆ, ಕುಡಿಯುವ ನೀರು, ನಿವೇಶನ ಮತ್ತಿತರ ಸರ್ಕಾರದ ಎಲ್ಲಾ ಸೌಲಭ್ಯಗಳನ್ನು ಕಲ್ಪಿಸುತ್ತೇವೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಮಾನತೆಗೆ ಆದ್ಯತೆ ನೀಡಿರುವುದರಿಂದ ಅವರ ಅಭಿಮಾನಿಯಾಗಿ ಮಲ್ಲಿಕಾರ್ಜುನ ಖರ್ಗೆ ರಾಷ್ಟ್ರ ನಾಯಕರಂತೆ ಪಕ್ಷಾತೀತವಾಗಿ ಕೆಲಸ ಮಾಡಲು ಬದ್ದವಾಗಿರುವುದಾಗಿ ತಿಳಿಸಿದರು.
ತಳಿಹಳ್ಳ ಪಂಚಾಯಿತಿ ನೂತನ ಉಪಾಧ್ಯಕ್ಷೆ ಶಾಂತ ಮಾತನಾಡಿ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರು, ಹಾಗೂ ಬೀದಿ ದೀಪದ ಸಮಸ್ಯೆ ಜತಗೆ ಪಂಚಾಯಿತಿ ವ್ಯಾಪ್ತಿಯಲ್ಲಿ ನಿವೇಶನ ರಹಿತರಿದ್ದು ಅದಕ್ಕೆ ಆದ್ಯತೆ ನೀಡಲಾಗುವುದು ಎಲ್ಲಾ ಸದಸ್ಯರು, ಹಾಗೂ ಅಧಿಕಾರಿಗಳನ್ನು ವಿಶ್ವಾಸಕ್ಕೆ ಪಡೆಯುವ ಮೂಲಕ ಎಲ್ಲರ ಸಹಕಾರೊಂದಿಗೆ ಪಂಚಾಯಿತಿ ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ಮೈಲಿಮನೆ ಪೂರ್ಣೇಶ್, ಟಿ.ಡಿ.ಮಲ್ಲೇಶ್ ಗೌಡ, ಟಿ.ಇ.ಮಂಜುನಾಥ್, ಹುಣಸೆಮುಕ್ಕಿ ಲಕ್ಷ್ಮಣ, ಮಹೇಶ್, ನರೇಂದ್ರ, ಕುಮಾರ್, ಚಂದ್ರಶೇಖರ್, ಹಾಲಯ್ಯ, ಕೃಷ್ಣಮೂರ್ತಿ, ಸದಸ್ಯರಾದÀ ಅರುಣ್‍ಕುಮಾರ್, ಶಾಂತಮ್ಮ, ಸುಧಾ, ವೆಂಕಟೇಶ್, ರತ್ನಮ್ಮ, ಸರೋಜಾ, ಸುರೇಶ್, ಮುಖಂಡರಾದ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!